ನಟ ದರ್ಶನ್ ಗೆ ಸರ್ಜಿಕಲ್ ಚೇರ್ ಒದಗಿಸುವ ವಿಚಾರ ಜೈಲಧಿಕಾರಿಗಳ ಸುಪರ್ದಿಗೆ ಬಿಟ್ಟಿದ್ದು: ಪರಮೇಶ್ವರ್

|

Updated on: Sep 02, 2024 | 6:04 PM

ರೇಣುಕಾಸ್ವಾಮಿ ಕೊಲೆ ಪ್ರಕರದಲ್ಲಿ ಅರೋಪಿಯಾಗಿರುವ ದರ್ಶನ್ ಗೆ ಸ್ಪೈನಲ್ ಕಾರ್ಡ್ ಸಮಸ್ಯೆಯಿದೆ ಮತ್ತು ಮೊನ್ನೆ ಅವರು ಉತ್ತರ ವಲಯದ ಡಿಐಜಿ ಟಿಪಿ ಶೇಷ ಅವರಿಗೆ ವೆಸ್ಟರ್ನ್ ಟಾಯ್ಲೆಟ್ ಒದಗಿಸಬೇಕೆಂದು ಮನವಿ ಮಾಡಿದ್ದರು. ಅವರ ಮನವಿಯನ್ನು ಪರಶೀಲಿಸುವುದಾಗಿ ಅಧಿಕಾರಿ ಹೇಳಿದ್ದರು.

ತುಮಕೂರು: ಈ ಬಾರಿಯ ದಸರಾ ಉತ್ಸವವನ್ನು ತುಮಕೂರು ಜಿಲ್ಲಾಡಳಿತ ಸಹ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು ಅದರ ಪ್ರಯುಕ್ತ ಇಂದು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್, ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ಸರ್ಜಿಕಲ್ ಚೇರ್ ನೀಡುವ ವಿಚಾರ ಅಲ್ಲಿನ ಜೈಲು ಅಧಿಕಾರಿಗಳ ಸುಪರ್ದಿ ಬಿಟ್ಟಿದ್ದು, ವೈದ್ಯಕೀಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೈದಿಗಳ ಅಗತ್ಯ ಪೂರೈಸಲು ಜೈಲು ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ದೀಢೀರನೆ ಕೇಂದ್ರ ಕಾರಾಗೃಹ ಭೇಟಿ ನೀಡಿದ ಜಿ ಪರಮೇಶ್ವರ್ ಜೈಲು ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿದರು

Follow us on