ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

Updated on: May 12, 2026 | 12:56 PM

ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ.

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಅಲ್ಲದೆ, ದೇಶದ ಇಂಧನ ಆಮದನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು ಮತ್ತು ಇಂಧನದ ಬೆಲೆ ಏರಿಕೆಗಳನ್ನು ಗಮನಿಸಿದಾಗ, ಈ ಸಲಹೆ ದೇಶದ ಆರ್ಥಿಕತೆಗೆ ಅತ್ಯಂತ ಮಹತ್ವದ್ದು ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಯವರ ಸಲಹೆಗಳು ದೇಶಕ್ಕೆ ಮತ್ತು ಜನರಿಗೆ ಒಳ್ಳೆಯದನ್ನೇ ಹೇಳುತ್ತವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಕೆ ಇಂಧನ ಉಳಿತಾಯಕ್ಕೆ ಉತ್ತಮ ಮಾರ್ಗವಾಗಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us