ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

Edited By:

Updated on: Apr 17, 2025 | 11:01 AM

ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವಿರುದ್ಧ ಮೈಸೂರಿನಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ಟಿವಿ9 ಜತೆ ಪ್ರತಿಕ್ರಿಯಿಸಿರುವ ನಾಗರಿಕರು, ಜಾತಿ ಗಣತಿ ಅಗತ್ಯ ಇಲ್ಲ. ನಮ್ಮ ಮನೆಗೆ ಯಾರೂ ಬಂದಿಲ್ಲ. ಸುಮ್ಮನೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ.

ಮೈಸೂರು, ಏಪ್ರಿಲ್ 17: ಜಾತಿ ಗಣತಿಯಿಂದ ಅನನುಕೂಲವೇ ಹೆಚ್ಚು. ಆಧುನಿಕ ಯುಗದಲ್ಲಿ ಜಾತಿ ಹೆಸರಿನಲ್ಲಿ ಜನರನ್ನು ಒಡೆಯುವ ಕೆಲಸವನ್ನು ಸರ್ಕಾರವೇ ಮಾಡುತ್ತಿದೆ ಎಂದು ಮೈಸೂರಿನಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಜಾತಿ ಗಣತಿ ಸರಿಯಾಗಿ ಆಗಿಲ್ಲ. ನಮ್ಮ ಮನೆಗೆ ಗಣತಿಗೆ ಬಂದೇ ಇಲ್ಲ ಎಂದು ಇನ್ನು ಕೆಲವರು ಆರೋಪಿಸಿದ್ದಾರೆ. ಸರ್ಕಾರದ ವಿರುದ್ಧ ಜನ ಏನೇನಂದರು ಎಂಬುದನ್ನು ಇಲ್ಲಿರುವ ವಿಡಿಯೋದಲ್ಲಿ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More