Insurance: ಪೊಲೀಸ್ ವಾಹನದ ದಾಖಲೆಯನ್ನೇ ಕೇಳಿದ ವಾಹನ ಸವಾರ, ಕಕ್ಕಾಬಿಕ್ಕಿಯಾದ ಪೊಲೀಸ್!

Kundapura police: ನಡುರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ, ಸಾರ್ವಜನಿಕರಿಗೆ ಫೈನ್ ಹಾಕುತ್ತಿದ್ದ ಪೊಲೀಸ್ ಅಧಿಕಾರಿನ್ನೇ ವಾಹನ ಸವಾರರೊಬ್ಬರು ವಾಹನದ ದಾಖಲೆ ಕೊಡುವಂತೆ ಜೋರಾಗಿಯೇ ಕೇಳಿದ್ದಾರೆ. ಅದಕ್ಕೆ ಕಕ್ಕಾಬಿಕ್ಕಿಯಾಗುವ ಸರದಿ ಪೊಲೀಸ್ ಅಧಿಕಾರಿಯದ್ದಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಕ್ರಾಸ್ ಬಳಿ ಈ ಪ್ರಸಂಗ ನಡೆದಿದೆ.

Insurance: ಪೊಲೀಸ್ ವಾಹನದ ದಾಖಲೆಯನ್ನೇ ಕೇಳಿದ ವಾಹನ ಸವಾರ, ಕಕ್ಕಾಬಿಕ್ಕಿಯಾದ ಪೊಲೀಸ್!
| Edited By: ಸಾಧು ಶ್ರೀನಾಥ್​

Updated on:Nov 16, 2023 | 11:52 AM

ಉಡುಪಿ: ನಡುರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ, ಸಾರ್ವಜನಿಕರಿಗೆ ಫೈನ್ ಹಾಕುತ್ತಿದ್ದ ಪೊಲೀಸ್ ಅಧಿಕಾರಿನ್ನೇ ವಾಹನ ಸವಾರರೊಬ್ಬರು ವಾಹನದ ದಾಖಲೆ ಕೊಡುವಂತೆ ಜೋರಾಗಿಯೇ ಕೇಳಿದ್ದಾರೆ. ಅದಕ್ಕೆ ಕಕ್ಕಾಬಿಕ್ಕಿಯಾಗುವ ಸರದಿ ಪೊಲೀಸ್ ಅಧಿಕಾರಿಯದ್ದಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಕ್ರಾಸ್ ಬಳಿ ಈ ಪ್ರಸಂಗ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಪೊಲೀಸ್ ಸಿಬ್ಬಂದಿಯಿಂದ (kundapura, udupi) ವಾಹನ ತಪಾಸಣೆ ನಡೆಯುತ್ತಿತ್ತು.

ಸೀಟ್ ಬೆಲ್ಟ್, ಇನ್ಶೂರೆನ್ಸ್ , ಹೆಲ್ಮೆಟ್ ವಿಚಾರವಾಗಿ ಪೊಲೀಸರು ಸವಾರರಿಗೆ ಫೈನ್ ಹಾಕುತ್ತಿದ್ದರು. ಈ ವೇಳೆ ತಪಾಸಣೆ ಮಾಡುತ್ತಿದ್ದ ಪೊಲೀಸ್ ವಾಹನದ ಮಾಹಿತಿ ಕಲೆಹಾಕಿದ ವಾಹನ ಸವಾರರೊಬ್ಬರು ಸುಮಾರು 13 ವರ್ಷಗಳಿಂದ ಇನ್ಶೂರೆನ್ಸ್ ಕಟ್ಟದೆ (insurance papers) ಓಡಾಡುತ್ತಿರುವ ಪೊಲೀಸ್ ಇಲಾಖೆಯ ವಾಹನದ ದಾಖಲೆ ಪತ್ರವನ್ನು ತೋರಿಸುವಂತೆ ಕೇಳಿದ್ದಾರೆ.

2011 ಕ್ಕೆ ಇನ್ಶೂರೆನ್ಸ್ ಡ್ಯೂ ಆಗಿರುವ ಪೊಲೀಸ್ ವಾಹನ ಕುರಿತು ವಾಹನ ಸವಾರ ವಿಚಾರಿಸಿದ್ದಾರೆ. ಈ ಕುರಿತು ಸೀದಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೇ ಕೇಳಿ. ಸದ್ಯಕ್ಕೆ ನನಗೆ ಫೈನ್ ಹಾಕಲು ಬಿಡಿ ಎಂದು ಪೊಲೀಸ್ ಅಧಿಕಾರಿ ಜಬರದಸ್ತು ಮಾಡಿದ್ದಾರೆ. ಹಾಗಾದ್ರೆ ಜನಸಾಮಾನ್ಯರಿಗೆ ಒಂದು ನ್ಯಾಯ, ಪೊಲೀಸರಿಗೆ ಒಂದು ನ್ಯಾಯವಾ? ಎಂದು ವಾಹನ ಸವಾರ ಪ್ರಶ್ನಿಸಿದ್ದಾರೆ. ಸದ್ಯ ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು (viral video), ವಾಹನ ಸವಾರನ ಕುರಿತು ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:39 pm, Tue, 7 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ