ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು; ಆಮೇಲೇನಾಯ್ತು?

Updated on: Jul 08, 2025 | 5:14 PM

ಮನೆಯಲ್ಲಿ ಒಂಟಿಯಾಗಿದ್ದಾಗ ಮೂರನೇ ಮಹಡಿಯ ಕಿಟಕಿಯಿಂದ ನೇತಾಡುತ್ತಿದ್ದ ಮಗುವನ್ನು ರಕ್ಷಿಸಿದ ಪುಣೆ ಅಗ್ನಿಶಾಮಕ ದಳದ ಸಿಬ್ಬಂದಿ ಯೋಗೇಶ್ ಅರ್ಜುನ್ ಚವಾಣ್ ಅವರ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ, ನೆರೆಮನೆಯ ಉಮೇಶ್ ಸುತಾರ್ ಅವರು ಆ ಮಗುವನ್ನು ಕಂಡು ಕಿರುಚಿದಾಗ ಅದೇ ಕಟ್ಟಡದಲ್ಲಿ ವಾಸವಾಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಜುನ್ ಬೀಗ ಹಾಕಿದ ಮೂರನೇ ಮಹಡಿಯ ಫ್ಲಾಟ್‌ನ ಕಿಟಕಿಯಲ್ಲಿ ಅನಿಶ್ಚಿತವಾಗಿ ಸಿಲುಕಿಕೊಂಡಿದ್ದ ಮಗುವನ್ನು ಕಾಪಾಡಿದ್ದಾರೆ.

ಪುಣೆ, ಜುಲೈ 8: ಮಹಾರಾಷ್ಟ್ರದ ಪುಣೆಯಲ್ಲಿ ಇಂದು ಮುಂಜಾನೆ ನಾಟಕೀಯ ಘಟನೆಯೊಂದು ನಡೆದಿದೆ. ಅಪ್ಪ-ಅಮ್ಮ ತಮ್ಮ 4 ವರ್ಷದ ಮಗಳನ್ನು ಮನೆಯಲ್ಲಿ ಬಿಟ್ಟು ಹೊರಗೆ ಹೋಗಿದ್ದರು. ಈ ವೇಳೆ ಆ ಬಾಲಕಿ ತಮ್ಮ ರೂಮಿನ ಕಿಟಕಿಯ ಸರಳಿನೊಳಗೆ ನುಸುಳಿ ಹೊರಗೆ ಬಂದಿದ್ದಾಳೆ. 3ನೇ ಮಹಡಿಯ ಕಿಟಕಿಯಿಂದ ಮಗು ನೇತಾಡುತ್ತಿರುವುದನ್ನು ಕಂಡ ಪಕ್ಕದ ಮನೆಯವರು ಜೋರಾಗಿ ಕೂಗಿದ್ದಾರೆ. ಅದೇ ಕಟ್ಟಡದಲ್ಲಿ ವಾಸವಾಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ರಜೆಯಲ್ಲಿದ್ದರೂ ತಕ್ಷಣ ಓಡಿಹೋಗಿ ಆ ಬಾಲಕಿಯ ಜೀವ ಉಳಿಸಿದ್ದಾರೆ.

ಮನೆಗೆ ಬೀಗ ಹಾಕಿದ್ದರಿಂದ ಒಳಗೆ ಹೋಗಿ ಆ ಮಗುವನ್ನು ಕಾಪಾಡಲು ಸಾಧ್ಯವಿರಲಿಲ್ಲ. 3ನೇ ಮಹಡಿಯಾದ್ದರಿಂದ ಆ ಮಗು ಕೆಳಗೆ ಬಿದ್ದು ಸಾಯುವ ಅಪಾಯವೂ ಇತ್ತು. ಅದೇವೇಳೆ ಹೊರಗೆ ಹೋಗಿದ್ದ ಆ ಮಗುವಿನ ತಾಯಿ ಬಂದಿದ್ದರಿಂದ ಮನೆಯೊಳಗೆ ಹೋದ ಅರ್ಜುನ್ ಆ ಮಗುವನ್ನು ಸುರಕ್ಷಿತವಾಗಿ ಒಳಗೆ ಎಳೆದುಕೊಂಡು ಕಾಪಾಡಿದ್ದಾರೆ. ಅವರ ಸಮಯಪ್ರಜ್ಞೆಯಿಂದ ಮಗು ಬದುಕುಳಿದಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More