AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​​ಕುಮಾರ್ ಸಮಾಧಿಗೆ ನಮಿಸಲು ಬಂದ ಜನಸಾಗರ; ಕಿಂಚಿತ್ತೂ ಕಡಿಮೆ ಆಗಿಲ್ಲ ಅಭಿಮಾನ

ಪುನೀತ್ ರಾಜ್​​ಕುಮಾರ್ ಸಮಾಧಿಗೆ ನಮಿಸಲು ಬಂದ ಜನಸಾಗರ; ಕಿಂಚಿತ್ತೂ ಕಡಿಮೆ ಆಗಿಲ್ಲ ಅಭಿಮಾನ

ಮದನ್​ ಕುಮಾರ್​
|

Updated on: Oct 29, 2025 | 5:38 PM

Share

‘ಪವರ್ ಸ್ಟಾರ್’ ಪುನೀತ್ ರಾಜ್​​ಕುಮಾರ್ ಅಗಲಿ ನಾಲ್ಕು ವರ್ಷ ಕಳೆದಿವೆ. ಫ್ಯಾನ್ಸ್ ಇಟ್ಟಿರುವ ಅಭಿಮಾನ ಕಿಂಚಿತ್ತೂ ಕಮ್ಮಿ ಆಗಿಲ್ಲ. ಪ್ರತಿದಿನ ಅನೇಕ ಅಭಿಮಾನಿಗಳು ಪುನೀತ್ ರಾಜ್​​ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಇಂದು (ಅ.29) 4ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರು ಅಗಲಿ 4 ವರ್ಷಗಳು ಕಳೆದಿವೆ. ಅವರ ಮೇಲೆ ಜನರು ಇಟ್ಟ ಅಭಿಮಾನ ಸ್ವಲ್ಪವೂ ಕಡಿಮೆ ಆಗಿಲ್ಲ. ಪ್ರತಿದಿನ ಹಲವಾರು ಅಭಿಮಾನಿಗಳು ಪುನೀತ್ ರಾಜ್​​ಕುಮಾರ್ ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಇಂದು (ಅಕ್ಟೋಬರ್ 29) ಅವರ 4ನೇ ವರ್ಷದ ಪುಣ್ಯಸ್ಮರಣೆ (Puneeth Rajkumar Death Anniversary). ಈ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ಸಮಾಧಿಗೆ ನಮಿಸಿದ್ದಾರೆ. ಈ ದಿನದಂದು ಅಪ್ಪುಗೆ ಗೌರವ ಸಲ್ಲಿಸಲು ರಾಜ್ಯದ ಬೇರೆ ಬೇರೆ ಊರುಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಬಂದಿದ್ದಾರೆ. ಪುನೀತ್ ರಾಜ್​​ಕುಮಾರ್ ಸಮಾಧಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಮುಂತಾದ ಜನಪರ ಕಾರ್ಯಗಳನ್ನು ಮಾಡಲಾಗುತ್ತಿದೆ. ಡಾ. ರಾಜ್​​ಕುಮಾರ್ ಕುಟುಂಬದರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.