‘ಜೇಮ್ಸ್​’ ಚಿತ್ರದ ಆ ಒಂದು ಸೀನ್​ ನೋಡಿ ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿ; ಪುನೀತ್​ ಮೇಲಿನ ಅಭಿಮಾನ​ ಶಾಶ್ವತ

‘ಜೇಮ್ಸ್​’ ಸಿನಿಮಾ ನೋಡಿ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ ಭಾವುಕರಾಗಿದ್ದಾರೆ. ಕಲಬುರಗಿಯ ‘ಸಂಗಮ’ ಚಿತ್ರಮಂದಿರದಲ್ಲಿ ಅಭಿಮಾನಿಯೊಬ್ಬರು ಅಳುತ್ತಿರುವ ವಿಡಿಯೋ ವೈರಲ್​ ಇಲ್ಲಿದೆ..

‘ಜೇಮ್ಸ್​’ ಚಿತ್ರದ ಆ ಒಂದು ಸೀನ್​ ನೋಡಿ ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿ; ಪುನೀತ್​ ಮೇಲಿನ ಅಭಿಮಾನ​ ಶಾಶ್ವತ
| Updated By: ಮದನ್​ ಕುಮಾರ್​

Updated on: Mar 17, 2022 | 10:21 AM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಪ್ರಾಣಕ್ಕಿಂತ ಹೆಚ್ಚಾಗಿ ಇಷ್ಟಪಡುವ ಜನರಿಗೆ ಅಪ್ಪು ನಿಧನದಿಂದ ಆದ ನೋವು ಅಷ್ಟಿಷ್ಟಲ್ಲ. ಇಂದು (ಮಾ.17) ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಜೇಮ್ಸ್​’ ಸಿನಿಮಾ (James Movie) ರಿಲೀಸ್​ ಆಗಿದೆ. ರಾಜ್ಯದ ಪ್ರತಿ ಮೂಲೆಯಲ್ಲೂ ಈ ಸಿನಿಮಾ ಅಬ್ಬರಿಸುತ್ತಿದೆ. ಎಲ್ಲ ಕಡೆಗಳಲ್ಲೂ ‘ಜೇಮ್ಸ್​’ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರನ್ನು ದೊಡ್ಡ ಪರದೆ ಮೇಲೆ ನೋಡಿದ ಅಭಿಮಾನಿಗಳು (Puneeth Rajkumar Fans) ಭಾವುಕರಾಗುತ್ತಿದ್ದಾರೆ. ಕೆಲವರಂತೂ ಅಕ್ಷರಶಃ ಕಣ್ಣೀರು ಹಾಕುತ್ತಿದ್ದಾರೆ. ಕಲಬುರಗಿಯ ‘ಸಂಗಮ’ ಚಿತ್ರಮಂದಿರದಲ್ಲಿ ಅಭಿಮಾನಿಯೊಬ್ಬರು ಅಳುತ್ತಿರುವ ವಿಡಿಯೋ ವೈರಲ್​ ಆಗಿದೆ. ‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಎಂಟ್ರಿ ಸೀನ್​ ನೋಡಿ ಅವರು ಸಖತ್​ ಎಮೋಷನಲ್​ ಆಗಿದ್ದಾರೆ. ತುಂಬ ಆಕರ್ಷಕವಾಗಿ ಪುನೀತ್​ ಎಂಟ್ರಿ ದೃಶ್ಯ ಮೂಡಿಬಂದಿದೆ. ಅದನ್ನು ನೋಡುತ್ತಿದ್ದಂತೆಯೇ ಅಭಿಮಾನಿಯ ದುಃಖ ಉಮ್ಮಳಿಸಿದೆ. ಚಿತ್ರಮಂದಿರದಲ್ಲಿ ಅವರು ಬಿಕ್ಕಿ ಬಿಕ್ಕ ಅತ್ತಿದ್ದಾರೆ. ಇನ್ನೂ ಅನೇಕರು ಸಿನಿಮಾ ನೋಡಿ ಹೊರಬರುವಾಗ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ:

‘ಜೇಮ್ಸ್​’ ಬಂದ್ರೂ ‘ದಿ ಕಾಶ್ಮೀರ್​ ಫೈಲ್ಸ್​’ ಹೌಸ್​ಫುಲ್​: ಹೆಚ್ಚುತ್ತಲೇ ಇದೆ ಈ ಸಿನಿಮಾ ಕಲೆಕ್ಷನ್​

James Movie Review: ಜೇಮ್ಸ್​ ವಿಮರ್ಶೆ: ಗೆಳೆತನದ ಕಥೆ ಹೇಳುವ ಒಂದು ‘ಪವರ್​ಫುಲ್​’ ಶೋ

Follow us
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ