ಭತ್ತದ ಗದ್ದೆಯಲ್ಲಿ ಮೂಡಿತು ಅಪ್ಪುವಿನ ಭಾವಚಿತ್ರ; ಇಲ್ಲಿದೆ ವಿಡಿಯೋ

Updated on: Oct 13, 2023 | 11:26 AM

ಜಪಾನ್ ಮೂಲದ ಗ್ರೀನ್ ಗೋಲ್ಡನ್ ರೋಸ್, ಕಾಲಾ ಬಟ್ಟಿ ಹಾಗೂ ಸ್ಥಳೀಯ ಸೋನಾ ಮಸೂರಿ ತಳಿಯ ಭತ್ತ ನಾಟಿ ಮಾಡಿದ್ದಾರೆ. ಜುಲೈನಲ್ಲಿ ಭತ್ತದ ನಾಟಿ ಮಾಡಲಾಗಿತ್ತು. ಮಳೆಯಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಹಣ ಖರ್ಚು ಮಾಡಿ ಟ್ಯಾಂಕರ್ ಮೂಲಕ ಗದ್ದೆಗೆ ನೀರುಣಿಸಲಾಗಿದೆ.  

ಪುನೀತ್ ರಾಜ್​ಕುಮಾರ್ (Puneeth Rajkumar) ಮೃತಪಟ್ಟು ಎರಡು ವರ್ಷ ಕಳೆಯುತ್ತಾ ಬಂದಿದೆ. ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ನೋವು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಹಲವು ರೀತಿಯಲ್ಲಿ ಸ್ಮರಿಸುವ ಕೆಲಸ ಆಗುತ್ತಿದೆ. ಈಗ ಭತ್ತದ ಗದ್ದೆಯಲ್ಲಿ ಪುನೀತ್ ಭಾವಚಿತ್ರ ಸಿದ್ಧಪಡಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್ನಲ್ಲಿ ವಿನೂತನ ಕಾರ್ಯ ಮಾಡಲಾಗಿದೆ. ವಿಶೇಷ ಚೇತನಾಗಿರೋ ಸತ್ಯನಾರಾಯಣ ಅವರು ಭತ್ತ ನಾಟಿ ಮಾಡಿದ್ದಾರೆ. ಜಪಾನ್ ಮೂಲದ ಗ್ರೀನ್ ಗೋಲ್ಡನ್ ರೋಸ್, ಕಾಲಾ ಬಟ್ಟಿ ಹಾಗೂ ಸ್ಥಳೀಯ ಸೋನಾ ಮಸೂರಿ ತಳಿಯ ಭತ್ತ ನಾಟಿ ಮಾಡಿದ್ದಾರೆ. ಜುಲೈನಲ್ಲಿ ಭತ್ತದ ನಾಟಿ ಮಾಡಲಾಗಿತ್ತು. ಮಳೆಯಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಹಣ ಖರ್ಚು ಮಾಡಿ ಟ್ಯಾಂಕರ್ ಮೂಲಕ ಗದ್ದೆಗೆ ನೀರುಣಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More