‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

| Updated By: ಮದನ್​ ಕುಮಾರ್​

Updated on: Oct 30, 2021 | 6:03 PM

‘ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬ ಸಂಕಟ ಆಗುತ್ತಿದೆ. ಕೈ ನಡುಗುತ್ತಿದೆ’ ಎಂದು ರಚಿತಾ ಕಣ್ಣೀರು ಸುರಿಸಿದ್ದಾರೆ. ಕಂಠೀರವ ಸ್ಟೇಡಿಯಂಗೆ ಆಗಮಿಸಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

‘ನಟ ಸಾರ್ವಭೌಮ’ ಮತ್ತು ‘ಚಕ್ರವ್ಯೂಹ’ ಸಿನಿಮಾಗಳಲ್ಲಿ ಪುನೀತ್​ ರಾಜ್​ಕುಮಾರ್​ ಮತ್ತು ರಚಿತಾ ರಾಮ್​ ಜೊತೆಯಾಗಿ ನಟಿಸಿದ್ದರು. ಇಂದು (ಅ.30) ಪುನೀತ್​ ಅವರ ಪಾರ್ಥಿವ ಶರೀರದ ದರ್ಶನ ಪಡೆದ ರಚಿತಾ ರಾಮ್​ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಅವರು ತುಂಬ ಸಂಕಟ ಆಗುತ್ತಿದೆ ಎಂದು ಅರ್ಧದಲ್ಲಿಯೇ ಮಾತು ನಿಲ್ಲಿಸಿದರು. ಅಪ್ಪು ನಿಧನದಿಂದ ಅಷ್ಟರಮಟ್ಟಿಗೆ ಅವರ ಮನಸ್ಸಿಗೆ ಘಾಸಿ ಆಗಿದೆ.

‘ಪುನೀತ್​ ಜೊತೆ ನಟಿಸಲು ನಾನು ಪುಣ್ಯ ಮಾಡಿದ್ದೆ. ಅದು ನಮ್ಮ ತಾಯಿಯ ಆಸೆ ಆಗಿತ್ತು. ಅದಕ್ಕಾಗಿ ದೇವರಿಗೆ ನಾನು ಧನ್ಯವಾದ ಹೇಳಬೇಕು. ಮೊನ್ನೆತಾನೇ ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ಸಿಕ್ಕಿದ್ದರು. ರಾತ್ರಿ ಅವರು ಪಾರ್ಟಿ ಮುಗಿಸಿ ಹೊರಟಾಗ ಹುಷಾರು ಅಂತ ಹೇಳಿದ್ದೆ. ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬ ಸಂಕಟ ಆಗುತ್ತಿದೆ. ಕೈ ನಡುಗುತ್ತಿದೆ’ ಎಂದು ರಚಿತಾ ಕಣ್ಣೀರು ಸುರಿಸಿದ್ದಾರೆ.

ಇದನ್ನೂ ಓದಿ:

ಪುನೀತ್​ ನಿಧನದಿಂದ ಮಕ್ಕಳ ಮನಸ್ಸಿಗೆ ಘಾಸಿ; ‘ಅಪ್ಪು ಅಣ್ಣ ಬೇಕು’ ಅಂತ ಅಳುವ ಕಂದಮ್ಮಗಳ ವಿಡಿಯೋ ವೈರಲ್​

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Follow us on