Puneeth Rajkumar: ಪುನೀತ್ ಸಮಾಧಿ ಬಳಿ ಕುಸಿದು ಬಿದ್ದ ಗನ್ ಮ್ಯಾನ್ ಪುತ್ರಿ; ಮರೆಯಲಾಗುತ್ತಿಲ್ಲ ಅಪ್ಪು ಅಗಲಿಕೆಯ ನೋವು
ಪತ್ನಿ ಅಶ್ವಿನಿ, ಪುತ್ರಿಯರಾದ ವಂದಿತಾ, ಧೃತಿ, ಸಹೋದರ ಶಿವರಾಜ್ಕುಮಾರ್ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪ್ರತಿ ಕ್ಷಣ ಕಂಬನಿ ಸುರಿಸುತ್ತಿದ್ದಾರೆ. ಹಾಲು ತುಪ್ಪ ಬಿಡುವ ವೇಳೆ ಪುನೀತ್ ಅವರ ಗನ್ ಮ್ಯಾನ್ ಪುತ್ರಿ ಕುಸಿದು ಬಿದ್ದ ಘಟನೆಯೂ ನಡೆಯಿತು.
ನಟ ಪುನೀತ್ ರಾಜ್ಕುಮಾರ್ ಅವರು ಹೀಗೆ ಅಕಾಲಿಕ ಮರಣಕ್ಕೆ ಒಳಗಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ನಿಧನದ ನೋವನ್ನು ಮರೆಯಲಾಗುತ್ತಿಲ್ಲ. ಅಪ್ಪು ಇಹಲೋಕ ತ್ಯಜಿಸಿ 5 ದಿನ ಕಳೆದಿದೆ. ಇಂದು (ನ.2) ಪುನೀತ್ ಸಮಾಧಿಗೆ ಕುಟುಂಬದವರು ಹಾಲು ತುಪ್ಪ ಬಿಟ್ಟಿದ್ದಾರೆ. ಪತ್ನಿ ಅಶ್ವಿನಿ, ಪುತ್ರಿಯರಾದ ವಂದಿತಾ, ಧೃತಿ, ಸಹೋದರ ಶಿವರಾಜ್ಕುಮಾರ್ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪ್ರತಿ ಕ್ಷಣ ಕಂಬನಿ ಸುರಿಸುತ್ತಿದ್ದಾರೆ. ಹಾಲು ತುಪ್ಪ ಬಿಡುವ ವೇಳೆ ಪುನೀತ್ ಅವರ ಗನ್ ಮ್ಯಾನ್ ಪುತ್ರಿ ಕುಸಿದು ಬಿದ್ದ ಘಟನೆಯೂ ನಡೆಯಿತು. ಚಿನ್ನದಂತಹ ವ್ಯಕ್ತಿತ್ವ ಹೊಂದಿದ್ದ ಅಪ್ಪು ಅವರ ನಿಧನದ ಸತ್ಯವನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಅಪಾರ ಸಂಖ್ಯೆಯ ಅಭಿಮಾನಿಗಳು ದೂರದ ಊರುಗಳಿಂದ ಬಂದು ಸಮಾಧಿ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಆದರೆ ಸದ್ಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶೀಘ್ರದಲ್ಲೇ ಅವಕಾಶ ಕೊಡುತ್ತೇವೆ ಎಂದು ರಾಜ್ ಕುಟುಂಬದವರು ಹೇಳಿದ್ದಾರೆ. ಕಂಠೀರವ ಸ್ಟುಡಿಯೋ ಎದುರು ಬಂದು ಕಾಯುತ್ತಿರುವ ಪುನೀತ್ ಅಭಿಮಾನಿಗಳ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ:
ಪುನೀತ್ ನಿಧನಕ್ಕೂ 15-20 ನಿಮಿಷ ಮುನ್ನ ನಿಜಕ್ಕೂ ಏನು ನಡೆಯಿತು? ಇಲ್ಲಿದೆ ಕಾರು ಚಾಲಕ ತೆರೆದಿಟ್ಟ ವಿವರ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

