Puneeth Namana: ‘ಪುನೀತ ನಮನ’ ಕಾರ್ಯಕ್ರಮ ಲೈವ್​ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್​ ಮಾಡಿ

| Updated By: ರಾಜೇಶ್ ದುಗ್ಗುಮನೆ

Updated on: Nov 16, 2021 | 3:57 PM

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ಕಾರ್ಯಕ್ರಮ ನಡೆಯುತ್ತಿರುವುದರಿಂದ ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕನ್ನಡ ಚಿತ್ರರಂಗಕ್ಕೆ (Sandalwood) ನೀಡಿದ ಕೊಡುಗೆ ಅಪಾರ. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಎಲ್ಲ ಕಡೆಗಳಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಇಂದು (ನವೆಂಬರ್​ 16) ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮ ಆರಂಭವಾಗಿದೆ. ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.  ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ಕಾರ್ಯಕ್ರಮ ನಡೆಯುತ್ತಿರುವುದರಿಂದ ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬರಲಿದ್ದಾರೆ.

ಇದನ್ನೂ ಓದಿ: ಪುನೀತ ನಮನಕ್ಕೆ ಪ್ರವೇಶವಿಲ್ಲದೆ ಬೇಸರಗೊಂಡಿದ್ದವರಿಗೆ ಹೊಸ ಸುದ್ದಿ; ಅಭಿಮಾನಿಗಳಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮ- ಇಲ್ಲಿದೆ ಸಂಪೂರ್ಣ ಮಾಹಿತಿ

Published On - 3:46 pm, Tue, 16 November 21

Follow us on