ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಕನ್ನಡ ಚಿತ್ರರಂಗಕ್ಕೆ (Sandalwood) ನೀಡಿದ ಕೊಡುಗೆ ಅಪಾರ. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಎಲ್ಲ ಕಡೆಗಳಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಇಂದು (ನವೆಂಬರ್ 16) ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮ ಆರಂಭವಾಗಿದೆ. ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ಕಾರ್ಯಕ್ರಮ ನಡೆಯುತ್ತಿರುವುದರಿಂದ ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬರಲಿದ್ದಾರೆ.
Published On - 3:46 pm, Tue, 16 November 21