ಬೆಂಗಳೂರಿನಲ್ಲಿ ಸಿದ್ಧವಾಯಿತು ಪುನೀತ್ ರಾಜ್ಕುಮಾರ್ ಪುತ್ಥಳಿ
ಬೆಂಗಳೂರಿನಲ್ಲಿ ಪುನೀತ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಫೈನಲ್ ಟಚ್ ನೀಡುವ ಕಾರ್ಯ ಆರಂಭಗೊಂಡಿದೆ. ಬನಶಂಕರಿಯಲ್ಲಿರುವ ಕ್ರಿಯೇಟಿವ್ ಆರ್ಟ್ ಡೈರೆಕ್ಟರ್ ಶಿವದತ್ತ ಕೈಯಲ್ಲಿ ಈ ಪುತ್ಥಳಿ ನಿರ್ಮಾಣವಾಗಿದೆ.
ಪುನೀತ್ ರಾಜ್ಕುಮಾರ್ ನಿಧನ ಹೊಂದಿ ಹಲವು ದಿನಗಳು ಕಳೆದಿವೆ. ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಜನರು ಭೇಟಿ ನೀಡುತ್ತಲೇ ಇದ್ದಾರೆ. ಪುನೀತ್ ಇಲ್ಲ ಎನ್ನುವ ಸತ್ಯವನ್ನು ಒಪ್ಪಿಕೊಳ್ಳೋಕೆ ಕುಟುಂಬ ಹಾಗೂ ಅಭಿಮಾನಿಗಳಿಂದ ಸಾಧ್ಯವಾಗುತ್ತಿಲ್ಲ. ಅಪ್ಪು ಅಣ್ಣ ಶಿವರಾಜ್ಕುಮಾರ್ ಸಾಕಷ್ಟು ಕಡೆಗಳಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಪುನೀತ್ ಅವರನ್ನು ನೆನಪು ಮಾಡಿಕೊಳ್ಳೋಕೆ ನಾನಾ ಕೆಲಸಗಳು ಕೂಡ ನಡೆಯುತ್ತಿವೆ. ರಸ್ತೆ, ಪಾರ್ಕ್ಗಳಿಗೆ ಅವರ ಹೆಸರನ್ನು ಇಡಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ. ಇನ್ನು, ಸಾಕಷ್ಟು ಕಡೆಗಳಲ್ಲಿ ಪುತ್ಥಳಿಗಳು ಕೂಡ ನಿರ್ಮಾಣ ಆಗುತ್ತಿವೆ. ಬೆಂಗಳೂರಿನಲ್ಲಿ ಪುನೀತ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಫೈನಲ್ ಟಚ್ ನೀಡುವ ಕಾರ್ಯ ಆರಂಭಗೊಂಡಿದೆ. ಬನಶಂಕರಿಯಲ್ಲಿರುವ ಕ್ರಿಯೇಟಿವ್ ಆರ್ಟ್ ಡೈರೆಕ್ಟರ್ ಶಿವದತ್ತ ಕೈಯಲ್ಲಿ ಈ ಪುತ್ಥಳಿ ನಿರ್ಮಾಣವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದವರು ಇದರ ನಿರ್ಮಾಣದ ಜವಾಬ್ದಾರಿ ಹೊತ್ತಿದೆ.
ಇದನ್ನೂ ಓದಿ: ದೇವರಿಗೆ ಮುಡಿ ಕೊಟ್ಟು, ಪುನೀತ್ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ
ಅಂಬರೀಷ್ ಫ್ಯಾನ್ಸ್ ನಿರ್ಧಾರಕ್ಕೆ ಸುಮಲತಾ ಬೇಸರ; ಪುನೀತ್ ಮತ್ತು ಪ್ರಶಸ್ತಿ ಬಗ್ಗೆ ಹೇಳಿದ್ದೇನು?
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

