ನಟ ಪುನೀತ್ ರಾಜ್ಕುಮಾರ್ ಅವರು ರಾಜಕೀಯದಿಂದ ಸದಾ ದೂರವೇ ಇದ್ದವರು. ರಾಜ್ಕುಮಾರ್ ಕೂಡ ಅಷ್ಟೇ. ಈಗ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಿವರಾಜ್ಕುಮಾರ್ ಅವರು ಪತ್ನಿ ಪರವಾಗಿ ಪ್ರಚಾರ ಮಾಡಲಿದ್ದಾರೆ. ಈ ಮಧ್ಯೆ ಪುನೀತ್ ಪತ್ನಿ ಅಶ್ವಿನಿ ಕೂಡ ಈ ಬಾರಿ ಚುನಾವಣೆ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಶ್ವಿನಿ ಪುನೀತ್ ರಾಜ್ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ತಮ್ಮನ್ನು ಬೆಂಬಲಿಸುವಂತೆ ಅವರು ಕೋರಿದ್ದಾರೆ ಎನ್ನಲಾಗಿದೆ. ಮಲ್ಲೇಶ್ವರ ಶಾಸಕ ಡಾ.ಅಶ್ವತ್ಥ್ ನಾರಾಯಣ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ