ಕನ್ನಡ ಸಿನಿಮಾಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ‘ಪುಷ್ಪ’ ಚಿತ್ರದ ಸಂಗೀತ ನಿರ್ದೇಶಕ

Updated on: Mar 05, 2025 | 8:58 AM

ಕನ್ನಡ ಚಿತ್ರರಂಗದವರು ಮಾಡಿರುವ ಸಾಧನೆ ಅಪಾರ. ಅದರಲ್ಲೂ ಇತ್ತೀಚೆಗೆ ಚಿತ್ರರಂಗದ ದಿಕ್ಕನ್ನು ಬದಲಾಯಿಸುವ ಕೆಲಸ ಆಗುತ್ತಿದೆ. ಈಗ ಕನ್ನಡ ಸಿನಿಮಾಗಳ ಬಗ್ಗೆ ‘ಪುಷ್ಪ’ ಚಿತ್ರದ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರು ಮಾತನಾಡಿದ್ದಾರೆ. ಅವರು ಏನು ಹೇಳಿದರು ಎನ್ನುವ ಬಗ್ಗೆ ಇಲ್ಲಿದೆ ವಿಡಿಯೋ.

‘ಪುಷ್ಪ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದ ದೇವಿಶ್ರೀ ಪ್ರಸಾದ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಕನ್ನಡ ಸಿನಿಮಾಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ‘ಕನ್ನಡದ ಕಲಾವಿದರು, ತಂತ್ರಜ್ಞರು ಟಾಲಿವುಡ್ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ ಅನ್ನೋದು ಖುಷಿಯ ವಿಚಾರ. ಕನ್ನಡದ ಕಾಂತಾರ, ಕೆಜಿಎಫ್ ಸಿನಿಮಾಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. ಈಗ ಯಾವುದೇ ಬೌಂಡರಿ ಇಲ್ಲ. ಎಲ್ಲವೂ ಇಂಡಿಯನ್ ಸಿನಿಮಾ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More