ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

Updated on: Nov 15, 2024 | 9:17 PM

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ. ಬೆಳಗ್ಗೆ ಜಮೀನಿಗೆ ಬಂದಿದ್ದ ರೈತರು ಬೃಹತ್ ಹೆಬ್ಬಾವು ಬಲೆಯಲ್ಲಿ ಸಿಲುಕಿದ್ದನ್ನು ಕಂಡು ಗಾಬರಿಗೊಂಡರು. ಈ ಹೆಬ್ಬಾವು ಸುಮಾರು 6 ಅಡಿ ಉದ್ದವಿತ್ತು. ನಂತರ ಇದನ್ನು ಬಲೆಯಿಂದ ಬಿಡಿಸಿ ಕಾಡಿಗೆ ಬಿಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More