ಯುವ ನಾಯಕರಾಗಿರುವ ನಿಖಿಲ್ ಮತ್ತು ವಿಜಯೇಂದ್ರ ರಾಜ್ಯದಲ್ಲಿ ತಮ್ಮ ಪಕ್ಷಗಳನ್ನು ಮುನ್ನಡೆಸಲಾರರೇ?

ಅರುಣ್​ ಕುಮಾರ್​ ಬೆಳ್ಳಿ

Updated on: Jun 26, 2025 | 7:35 PM

ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಕಾರ್ಯಕ್ರಮ ಕಾರಣಾಂತರಗಳಿಂದ ಮುಂದೂಡಲಾಗುತ್ತಿದೆ, ನಿಖಿಲ್ ರಾಜ್ಯದಲ್ಲಿ ಸುತ್ತಾಡುವುದನ್ನು ಮುಂದುವರಿಸಿದ್ದಾರೆ, ಜನ ನಿರೀಕ್ಷಿಸಿದಷ್ಟು ಸೇರುತ್ತಿಲ್ಲ. ಮತ್ತೊಂದೆಡೆ ವಿಜಯೇಂದ್ರ ಅವರನ್ನು ಬದಲಾಯಿಸುವ ಸೂಚನೆಗಳು ದಿನ ಕಳೆದಂತೆ ನಿಚ್ಚಳವಾಗುತ್ತಿವೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿರುವದರಿಂದ ಪಕ್ಷದ ಜನಪ್ರಿಯತೆ ಕಡಿಮೆಯಾಗುವುದನ್ನು ಸಹಿಸಲಾರದು.

ರಾಯಚೂರು, ಜೂನ್ 26: ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆಯ ಕೆಲಸ ಶುರುಮಾಡಿದ್ದಾರೆ . ರಾಜ್ಯದೆಲ್ಲೆಡೆ ಸುತ್ತುತ್ತಿರುವ ಅವರು ಇಂದು ಜಿಲ್ಲೆಯ ಸಿಂಧನೂರಲ್ಲಿ (Sindhanur) ಒಂದು ಸಮಾವೇಶ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಅವರಿಗೆ ಪತ್ರಕರ್ತರು, ಬಿಜೆಪಿ ರಾಜ್ಯಾಧ್ಯಕ್ಷರಾಗಿರವ ವಿಜಯೇಂದ್ರ ತಮ್ಮ ತಂದೆಯ ಸಾಧನೆ ಮತ್ತು ಜೆಡಿಎಸ್ ನಾಯಕರಾಗಿರವ ನೀವು, ನಿಮ್ಮ ತಾತ ಹಾಗೂ ತಂದೆಯ ಸಾಧನೆಗಳನ್ನು ಹೇಳಿಕೊಳ್ಳುತ್ತಿರುವಿರಿ, ಜನ ಯಾರನ್ನು ನಂಬಬೇಕು ಅಂತ ಕೇಳಿದಾಗ; ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳು, ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ್ದೇವೆ ಮತ್ತು ಒಳ್ಳೆಯ ಉದ್ದೇಶಕ್ಕಾಗಿ ಕೈ ಜೋಡಿಸಿದ್ದೇವೆ, ಅವರ ಸಂಘಟನೆ ಅವರು ಮಾಡುತ್ತಾರೆ ನಮ್ಮ ಸಂಘಟನೆ ನಾವು ಮಾಡುತ್ತೇವೆ ಎಂದು ನಿಖಿಲ್ ಹೇಳಿದರು.

ಇದನ್ನೂ ಓದಿ: ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್ ಕುಮಾರಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.