ಕೆ ಸುಧಾಕರ್ ವಾಪಸ್ಸು ಬಂದರೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಗುವುದೇ ಅಂದಾಗ ಪರಮೇಶ್ವರ್ ಸಿಡುಕಿದರು!

Updated on: Feb 09, 2024 | 11:40 AM

ಕೆಲದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಸುಧಾಕರ್ ಬಿಜೆಪಿ ಸೇರಿದ್ದಕ್ಕೆ ಒಂದು ಬಗೆಯ ಹತಾಶೆ ಮತ್ತು ವಿಷಾದದ ಭಾವದಲ್ಲಿ ಮಾತಾಡಿದ್ದರು. ಕಾಂಗ್ರೆಸ್ ನಲ್ಲೇ ಉಳಿದಿದ್ದರೆ ಶಾಸಕರಂತೂ ಆಗೇ ಆಗುತ್ತಿದ್ದಿರಿ ಅಂತ ಬೆಂಬಲಿಗರು ಹೇಳುತ್ತಿದ್ದಾರೆ ಎಂದಿದ್ದರು. ಅವರು ತಮ್ಮ ಮನದಾಳದ ಮಾತನ್ನು ಬೆಂಬಲಿಗರ ಮೇಲೆ ಹಾಕಿ ಹಾಗೆ ಹೇಳಿರಬಹುದು ಎಂದು ರಾಜಕೀಯ ಪರಿಣಿತರು ಹೇಳುತ್ತಿದ್ದಾರೆ

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ಮಂಡ್ಯದಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ (Mandya SP) ಅನುಮತಿ ನೀಡಿದ್ದಾರೆ, ಆದರೆ ಕಾನೂನು ಉಲ್ಲಂಘಿಸುವ ಕೃತ್ಯಗಳಲ್ಲಿ ಪ್ರತಿಭಟನೆಕಾರರು ತೊಡಗಿದರೆ, ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಡಾ ಕೆ ಸುಧಾಕರ್ (Dr K Sudhakar) ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಪರಮೇಶ್ವರ್ ಸಿಡುಕಿದರು. ಕೆಲದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಸುಧಾಕರ್ ಬಿಜೆಪಿ ಸೇರಿದ್ದಕ್ಕೆ ಒಂದು ಬಗೆಯ ಹತಾಶೆ ಮತ್ತು ವಿಷಾದದ ಭಾವದಲ್ಲಿ ಮಾತಾಡಿದ್ದರು. ಕಾಂಗ್ರೆಸ್ ನಲ್ಲೇ ಉಳಿದಿದ್ದರೆ ಶಾಸಕರಂತೂ ಆಗೇ ಆಗುತ್ತಿದ್ದಿರಿ ಅಂತ ಬೆಂಬಲಿಗರು ಹೇಳುತ್ತಿದ್ದಾರೆ ಎಂದಿದ್ದರು. ಅವರು ತಮ್ಮ ಮನದಾಳದ ಮಾತನ್ನು ಬೆಂಬಲಿಗರ ಮೇಲೆ ಹಾಕಿ ಹಾಗೆ ಹೇಳಿರಬಹುದು ಎಂದು ರಾಜಕೀಯ ಪರಿಣಿತರು ಹೇಳುತ್ತಿದ್ದಾರೆ. ಅವರೇನಾದರೂ ಪಕ್ಷಕ್ಕೆ ವಾಪಸ್ಸಾಗುವ ಬಗ್ಗೆ ಮಾತಾಡಿದ್ದಾರೆಯೇ? ಬಂದರೆ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಚಿಕ್ಕಬಳ್ಳಾಪುರದ ಟಿಕೆಟ್ ನೀಡಬಹುದೇ ಅಂತ ಕೇಳಿದಾಗ ಅದನ್ನು ಸುಧಾಕರ್ ಅವರನ್ನೇ ಕೇಳಿ ಅಂತ ಕೋಪದಲ್ಲಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More