ಮುಸ್ಲಿಂ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರಾದರೂ ಸಿಡಿಮಿಡಿಗೊಂಡು ಸುದ್ದಿಗೋಷ್ಟಿಯಿಂದ ಎದ್ದುಬಿಟ್ಟರು!

ವಿಷಯದ ಹಿಂದೆ ಮುಂದೆ ಅರಿಯದೆ ಪ್ರಶ್ನೆಗಳನ್ನು ಯಾಕೆ ಕೇಳುತ್ತೀರಿ ಅಂತ ಕೋಪದಲ್ಲಿ ಹೇಳಿದ ಅವರು, ಬೊಮ್ಮಾಯಿ ಸರಕಾರವು ಮುಸಲ್ಮಾನರ ಮೀಸಲಾತಿಯನ್ನು ರದ್ದು ಮಾಡಲ್ಲ ಎಂದು ನ್ಯಾಯಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿತ್ತು ಎಂದು ಹೇಳಿ ಮಾಧ್ಯಮದ ಪ್ರತಿನಿಧಿಗಳು ಸಾರ್ ಸಾರ್ ಎಂದು ಬೇರೆ ಪ್ರಶ್ನೆ ಕೇಳುತ್ತಿದ್ದರೂ ಸಾಕು ನಿಮ್ಮ ಪ್ರಶ್ನೆಗಳು ಅನ್ನುತ್ತಾ ಅಲ್ಲಿಂದ ಎದ್ದರು.

ಮುಸ್ಲಿಂ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರಾದರೂ ಸಿಡಿಮಿಡಿಗೊಂಡು ಸುದ್ದಿಗೋಷ್ಟಿಯಿಂದ ಎದ್ದುಬಿಟ್ಟರು!
|

Updated on: Apr 25, 2024 | 2:32 PM

ಬೀದರ್: ಮಾಧ್ಯಮಗಳ ಮೇಲೆ ರೇಗುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಗಾಗ ಮಾಡುತ್ತಿರುತ್ತಾರೆ, ಅಂಥದೊಂದು ಘಟನೆ ಇಂದು ಬೀದರ್ ನಲ್ಲಿ ನಡೆಯಿತು. ಸಚಿವ ಈಶ್ವರ್ ಖಂಡ್ರೆ (Eshwar Khandre) ಜೊತೆ ಸುದ್ದಿಗೋಷ್ಟಿ ನಡೆಸುತ್ತಿದ್ದ ಸಿದ್ದರಾಮಯ್ಯನವರಿಗೆ ಅವರ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ (Muslim reservation) ಹೆಚ್ಚಿಸಲು ನಿರ್ಧರಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಅವರ ಸಿಡಿಮಿಡಿಗೊಂಡರು. 1994 ರಲ್ಲಿ ಚಿನ್ನಪ್ಪ ರೆಡ್ಡಿ ಅಯೋಗ ನೀಡಿದ ವರದಿಯ ಪ್ರಕಾರ ಮುಸ್ಲಿಂ ಸಮುದಾಯದವರಿಗೆ 4 ಪರ್ಸೆಂಟ್ ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಬಸವರಾಜ ಬೊಮ್ಮಯಿ ಸರ್ಕಾರ ಅದನ್ನು ತೆಗೆದುಹಾಕಿತ್ತು. ಪ್ರಕರಣ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದಾಗ ಬಿಜೆಪಿ ಸರ್ಕಾರ ಕೋರ್ಟ್ ಗೆ ಏನು ಹೇಳಿತ್ತು ನಿಮಗೆ ಗೊತ್ತಾ? ಅಂತ ಪ್ರಶ್ನೆ ಕೇಳಿದ ಪತ್ರಕರ್ತನನ್ನು ಪ್ರಶ್ನಿಸಿದರು. ಅವರಿಂದ ಉತ್ತರ ಬಾರದೆ ಹೋದಾಗ ಸಿದ್ದರಾಮಯ್ಯನವರಿಗೆ ರೇಗಿತು. ವಿಷಯದ ಹಿಂದೆ ಮುಂದೆ ಅರಿಯದೆ ಪ್ರಶ್ನೆಗಳನ್ನು ಯಾಕೆ ಕೇಳುತ್ತೀರಿ ಅಂತ ಕೋಪದಲ್ಲಿ ಹೇಳಿದ ಅವರು, ಬೊಮ್ಮಾಯಿ ಸರಕಾರವು ಮುಸಲ್ಮಾನರ ಮೀಸಲಾತಿಯನ್ನು ರದ್ದು ಮಾಡಲ್ಲ ಎಂದು ನ್ಯಾಯಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿತ್ತು ಎಂದು ಹೇಳಿ ಮಾಧ್ಯಮದ ಪ್ರತಿನಿಧಿಗಳು ಸಾರ್ ಸಾರ್ ಎಂದು ಬೇರೆ ಪ್ರಶ್ನೆ ಕೇಳುತ್ತಿದ್ದರೂ ಸಾಕು ನಿಮ್ಮ ಪ್ರಶ್ನೆಗಳು ಅನ್ನುತ್ತಾ ಅಲ್ಲಿಂದ ಎದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಗಳೂರಲ್ಲಿ ಕುಕ್ಕರ್ ಬ್ಲಾಸ್ಟ್ ನಡೆದಾಗ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿತ್ತು? ಸಿದ್ದರಾಮಯ್ಯ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ