AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೊಸ ಪಾರ್ಕಿಂಗ್ ಪಾಲಿಸಿಗೆ ಆರ್. ಅಶೋಕ್ ಕೆಂಡಾಮಂಡಲ

ಬೆಂಗಳೂರಿನ ಹೊಸ ಪಾರ್ಕಿಂಗ್ ಪಾಲಿಸಿಗೆ ಆರ್. ಅಶೋಕ್ ಕೆಂಡಾಮಂಡಲ

ಭಾವನಾ ಹೆಗಡೆ
|

Updated on: Aug 14, 2026 | 11:22 AM

Share

ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯ ಹಾಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ಅವರು ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಪಾಪರ್ ಆಗಿದೆ, ಅಂದರೆ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಹೇಳಿದ ಅವರು, ಸರ್ಕಾರವು ತನ್ನನ್ನು ತಾನೇ ಪಾಪರ್ ಸರ್ಕಾರ ಎಂದು ಘೋಷಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯ ಹಾಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ಅವರು ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಪಾಪರ್ ಆಗಿದೆ, ಅಂದರೆ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಹೇಳಿದ ಅವರು, ಸರ್ಕಾರವು ತನ್ನನ್ನು ತಾನೇ ಪಾಪರ್ ಸರ್ಕಾರ ಎಂದು ಘೋಷಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನ ಏಳು ಕಾರ್ಪೊರೇಷನ್‌ಗಳಲ್ಲಿ ಐದು ಕಾರ್ಪೊರೇಷನ್‌ಗಳು ಈಗಾಗಲೇ ಪಾಪರ್ ಆಗಿ, ಬೋರ್ಡ್ ಹಾಕಿಕೊಂಡಿವೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದ ಕಾರಣ, ತೆರಿಗೆಗಳ ಮೇಲೆ ತೆರಿಗೆಗಳನ್ನು ಹೇರುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ಕಸದ ಮೇಲೆ, ಎಲೆಕ್ಟ್ರಿಕ್ ಚಾರ್ಜ್ ಮೇಲೆ, ಹಾಲಿನ ಮೇಲೆ ಮತ್ತು ಮನೆಗಳ ಮೇಲೆ ತೆರಿಗೆಗಳನ್ನು ಹಾಕಲಾಗಿದ್ದು, ಈಗ ಮನೆ ಮುಂದೆ ನಿಲ್ಲಿಸುವ ಕಾರುಗಳ ಮೇಲೂ ತೆರಿಗೆ ವಿಧಿಸಲು ಸರ್ಕಾರ ಮುಂದಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us