AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ

ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ

ರಾಮ್​, ಮೈಸೂರು
| Edited By: |

Updated on: Jul 11, 2026 | 5:30 PM

Share

ಮುಖ್ಯಾಂಶಗಳು

  • ಬಾಂಗ್ಲಾ ವಲಸಿಗರಿಗೆ ಮತದಾನದ ಹಕ್ಕು ಕೊಡಲು ಸರ್ಕಾರ ಮುಂದಾಗಿದೆ
  • ಶಾಶ್ವತ ವಾಸ ದೃಢೀಕರಣ ಪತ್ರ ಕೊಡುವ ಹಕ್ಕು ರಾಜ್ಯ ಸರ್ಕಾರಕ್ಕಿಲ್ಲ
  • ಸರ್ಕಾರ ಶಾಶ್ವತ ವಾಸ ದೃಢೀಕರಣ ಪತ್ರ ಆದೇಶ ರದ್ದು ಮಾಡಬೇಕು

ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಸರ್ಕಾರದ ಆದೇಶಕ್ಕೆ ಆರ್. ಅಶೋಕ್​ ವಿರೋಧಿಸಿದ್ದಾರೆ. ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸೇರಿದೆ ಎಂದು ಅವರು ಆರೋಪಿಸಿದ್ದಾರೆ. ವಿದೇಶಿಯರಿಗೆ ಪೌರತ್ವ ನೀಡುವ ಹುನ್ನಾರ ಇದಾಗಿದೆ ಎಂದು ಹೇಳಿರುವ ಅಶೋಕ್, ಕೂಡಲೇ ಆದೇಶ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಮೈಸೂರು, ಜುಲೈ 11: ರಾಜ್ಯದಲ್ಲಿ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘‘ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೂಡಲೇ ಅದನ್ನು ವಾಪಸ್ ಪಡೆಯುವಂತೆ’’ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಅವರು, ‘‘ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಪೌರತ್ವವನ್ನು ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಸೇರಿದ್ದು. ಪ್ರಸ್ತುತ ಆದೇಶವು 10 ವರ್ಷಗಳ ಕಾಲ ರಾಜ್ಯದಲ್ಲಿ ವಾಸಿಸಿದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಿದ್ದು, ಇದು ವಿದೇಶಿಯರಿಗೆ, ವಿಶೇಷವಾಗಿ ಬಾಂಗ್ಲಾದೇಶದವರಿಗೆ ನೆರವಾಗುವ ಹುನ್ನಾರ’’ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us