AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಹಂಚಿಕೆ ಸಮರ್ಥಿಸಿಕೊಳ್ಳುವ ಭರದಲ್ಲಿ ಆರ್ ಅಶೋಕ ಅತಾರ್ಕಿಕ ವಾದ ಮಂಡಿಸುತ್ತಾರೆ!

ಅವರು ಊಟದಲ್ಲಿನ ಬಗೆಗಳ ಬಗ್ಗೆ ಮಾತಾಡುತ್ತಾರೆ. ಆದರೆ ಪ್ರಶ್ನೆ ಎದ್ದಿರೋದು ಊಟದ ಪ್ರಮಾಣದ ಬಗ್ಗೆ. ಒಬ್ಬಟ್ಟು ಊಟ ಯಾರೂ ಕೇಳಿಲ್ಲ; ಮುದ್ದೆನೋ, ರೋಟ್ಟಿಯೋ ಅಥವಾ ಅನ್ನವೋ ಅದನ್ನು ಸಮಾನವಾಗಿ ಹಂಚಿ ಅನ್ನೋದು ಚರ್ಚೆಯ ವಸ್ತುವಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 03, 2024 | 4:06 PM

Share

ಬೆಂಗಳೂರು: ಬಿಜೆಪಿಯ ರಾಜ್ಯ ಘಟಕ ರಾಜ್ಯದಲ್ಲಿ ಕೆಲ ಉತ್ತಮ ವಕ್ತಾರರನ್ನು ನೇಮಕ ಮಾಡುವುದು ಬೆಟರ್ ಅನಿಸುತ್ತೆ. ಸೂಕ್ಷ್ಮ ಮತ್ತು ಗಂಭೀರ ವಿಷಯಗಳ ಚರ್ಚೆ ಎದ್ದಾಗ ವಿರೋಧ ಪಕ್ಷದ ನಾಯಕರಾಗಿರುವ ಅರ್ ಅಶೋಕ (R Ashoka) ಅವರನ್ನು ಮಾಧ್ಯಮಗಳ ಮುಂದೆ ಕೂರಿಸಿದಾಗ ಅತಾರ್ಕಿಕ (illogical) ಪ್ರತಿಕ್ರಿಯೆಗಳನ್ನು ನೀಡುತ್ತಾರೆ. ಅನುದಾನ ಹಂಚಿಕೆಯಲ್ಲಿ (grants distribution) ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ ಮತ್ತು ಅದೇ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎಲ್ಲ ಸದಸ್ಯರು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕೂಡ ಮುಂದಾಗಿದ್ದಾರೆ. ರಾಜ್ಯಕ್ಕೆ ಸಿಕ್ಕಿರುವ ಕಡಿಮೆ ಅನುದಾನವನ್ನು ಅಶೋಕ ಸಮರ್ಥಿಸಿಕೊಳ್ಳ್ಳುವ ರೀತಿ ವಿಚಿತ್ರವೆನಿಸುತ್ತದೆ ಮತ್ತು ಹಾಸ್ಯಾಸ್ಪದವಾಗಿದೆ. ತಾಯಿ ಮತ್ತು ಮಕ್ಕಳ ನಿದರ್ಶನವನ್ನು ಅವರು ನೀಡುತ್ತಾರೆ.

ತಾಯಿ ತನ್ನ ಮಕ್ಕಳಿಗೆ ಊಟ ನೀಡುವಾಗ ತಾರತಮ್ಯ ಮಾಡಲ್ಲ, ಜಾಸ್ತಿ ಸಂಪಾದನೆ ಮಾಡೋನಿಗೆ ಒಬ್ಬಟ್ಟು ಕಡಿಮೆ ದುಡಿಯುವವನಿಗೆ ಒಬ್ಬಟ್ಟು ಇಲ್ಲದ ಊಟ ನೀಡಲ್ಲ, ಹಾಗೆಯೇ ಕೇಂದ್ರ ಸರ್ಕಾರ ಸಹ ರಾಜ್ಯಗಳ ನಡುವೆ ಭೇದಭಾವ ಮಾಡದೆ ಅನುದಾನ ಹಂಚುತ್ತದೆ, ಇದನ್ನು ಅರ್ಥ ಮಾಡಿಕೊಳ್ಳುವಷ್ಟು ಸಾಮಾನ್ಯ ಜ್ಞಾನವೂ ಸಿದ್ದರಾಮಯ್ಯರಿಗಿಲ್ಲ ಅನ್ನುತ್ತಾರೆ. ಅವರು ಹೇಳುವ ತರ್ಕ ಅರ್ಥವಾಗಲ್ಲ, ಅವರು ಊಟದಲ್ಲಿನ ಬಗೆಗಳ ಬಗ್ಗೆ ಮಾತಾಡುತ್ತಾರೆ. ಆದರೆ ಪ್ರಶ್ನೆ ಎದ್ದಿರೋದು ಊಟದ ಪ್ರಮಾಣದ ಬಗ್ಗೆ. ಒಬ್ಬಟ್ಟು ಊಟ ಯಾರೂ ಕೇಳಿಲ್ಲ; ಮುದ್ದೆನೋ, ರೋಟ್ಟಿಯೋ ಅಥವಾ ಅನ್ನವೋ ಅದನ್ನು ಸಮಾನವಾಗಿ ಹಂಚಿ ಅನ್ನೋದು ಚರ್ಚೆಯ ವಸ್ತುವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ