ಅಶೋಕ ಸ್ವಭಾವವೇ ಹಾಗೆ, ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ಎಸ್ ಅರ್ ವಿಶ್ವನಾಥ್, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Dec 09, 2023 | 4:43 PM

ವಿರೋಧ ಪಕ್ಷದ ನಾಯಕ ನೇರವಾಗಿ ಅಧಿಕಾರಿಗಳೊಂದಿಗೆ ಮಾತಾಡಬಹುದು ಮತ್ತು ಮುಖ್ಯಮಂತ್ರಿಯೊಂದಿಗೂ ಸಮಸ್ಯೆಗಳನ್ನು ಚರ್ಚಿಸಬಹುದು ಈ ಹಿನ್ನೆಲೆಯಲ್ಲೇ ಅವರು ಶಾಸಕರನ್ನು ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ, ಈ ಸ್ಥಾನ ಅವರಿಗೆ ಈಗಿನ್ನೂ ಹೊಸದಾಗಿರುವುದರಿಂದ ಮುಂಬರುವ ದಿನಗಳಲ್ಲಿ ಸುಧಾರಿಸಿಕೊಳ್ಳಬಹುದು ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದರು.

ಬೆಂಗಳೂರು: ಮೊದಲಿನಿಂದಲೂ ಆರ್ ಅಶೋಕ (R Ashoka) ಸ್ವಭಾವವೇ ಹಾಗೆ, ಯಾರನ್ನೂ ವಿಶ್ವಾಸಕ್ಕೆ ತೆಗೆದದುಕೊಳ್ಳಲ್ಲ, ದಿಢೀರ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಅಶೋಕ ಮಾತಾಡುತ್ತಿರುವ ಸಮಯದಲ್ಲೇ ಸದನದಿಂದ ಹೊರನಡೆದ ಹಿರಿಯ ಬಿಜೆಪಿ ಶಾಸಕ ಎಸ್ ಅರ್ ವಿಶ್ವನಾಥ್ (SR Vishwanath) ಹೇಳಿದರು, ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಅವರು, ವಿರೋಧ ಪಕ್ಷದ ನಾಯಕನಾದವನ (Leader of Opposition) ಮೇಲೆ ದೊಡ್ಡ ಜವಾಬ್ದಾರಿ ಇರುತ್ತದೆ, ಪಕ್ಷದ ಶಾಸಕರ ಹೆಗಲ ಮೇಲೆ ಕೈಹಾಕಿ ವಿಶ್ವಾಸದಿಂದ ಮಾತಾಡಬೇಕಾಗುತ್ತದೆ, ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟಕೊಳ್ಳಬೇಕಾಗುತ್ತದೆ ಯಾಕೆಂದರೆ ಅವರಿಂದಲೇ ಪಕ್ಷ, ಪಕ್ಷದ ಚಟುವಟಿಕೆಗಳಿಗೆ ಜೀವ ತುಂಬುವವರೇ ಅವರು ಎಂದು ವಿಶ್ವನಾಥ್ ಹೇಳಿದರು. ವಿರೋಧ ಪಕ್ಷದ ನಾಯಕ ನೇರವಾಗಿ ಅಧಿಕಾರಿಗಳೊಂದಿಗೆ ಮಾತಾಡಬಹುದು ಮತ್ತು ಮುಖ್ಯಮಂತ್ರಿಯೊಂದಿಗೂ ಸಮಸ್ಯೆಗಳನ್ನು ಚರ್ಚಿಸಬಹುದು ಈ ಹಿನ್ನೆಲೆಯಲ್ಲೇ ಅವರು ಶಾಸಕರನ್ನು ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ, ಈ ಸ್ಥಾನ ಅವರಿಗೆ ಈಗಿನ್ನೂ ಹೊಸದಾಗಿರುವುದರಿಂದ ಮುಂಬರುವ ದಿನಗಳಲ್ಲಿ ಸುಧಾರಿಸಿಕೊಳ್ಳಬಹುದು ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.