AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ನಾನು ಬಜರಂಗ ದಳದ ಸದಸ್ಯ, ತಾಕತ್ತಿದ್ರೆ ಕಾಂಗ್ರೆಸ್ ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳಲಿ: ಅರ್ ಅಶೋಕ

Karnataka Assembly Polls; ನಾನು ಬಜರಂಗ ದಳದ ಸದಸ್ಯ, ತಾಕತ್ತಿದ್ರೆ ಕಾಂಗ್ರೆಸ್ ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳಲಿ: ಅರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:May 04, 2023 | 2:30 PM

Share

ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಅಶೋಕ ಹೇಳಿದರು.

ರಾಮನಗರ: ಬಜರಂಗ ದಳವನ್ನು ಬ್ಯಾನ್ ಮಾಡುವ ಅಂಶವನ್ನು ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ (manifesto) ಸೇರಿಸಿದ್ದು ದೇಶದಾದ್ಯಂತ ಚರ್ಚೆಯಾಗುತ್ತಿದೆ ಮತ್ತು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಕಟುವಾಗಿ ಟೀಕಿಸುತ್ತಿವೆ. ಕನಕಪುರ ಕ್ಷೇತ್ರದಲ್ಲಿ ಇಂದು ಪ್ರಚಾರ ನಡೆಸುತ್ತಿದ್ದ ಬಿಜೆಪಿ ಅಭ್ಯರ್ಥಿ ಆರ್ ಅಶೋಕ (R Ashoka) ಶಿವನಹಳ್ಳಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ, ತಾನು ಬಜರಂಗ ದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ದಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 04, 2023 02:30 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.