ವಿರೋಧ ಪಕ್ಷದ ನಾಯಕನಾಗಿ ಅಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕವನ್ನು ಪ್ರತಿನಿಧಿಸುತ್ತಾರೆ: ಸಿಟಿ ರವಿ
ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕದ ಪ್ರತಿನಿಧಿಯಾಗಿದ್ದಾರೆ ಎಂದ ರವಿ, ಅಶೋಕ್ ಅವರ ಆಯ್ಕೆ, ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರ ಸಮ್ಮುಖ ಮತ್ತು ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಆಗಿದೆ ಅಂತ ಹೇಳಿದರು.
ಉಡುಪಿ: ನಗದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಉತ್ತರ ಕರ್ನಾಟಕದ ನಾಯಕನಿಗೆ ವಿರೋಧ ಪಕ್ಷ ನಾಯಕನ ಸ್ಥಾನ ಸಿಗದಿರುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಅರವಿಂದ್ ಬೆಲ್ಲದ್ (Aravind Bellad) ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದರು. ಎರಡು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕದವರೇ ಅಂತ ಹೇಳಿದ ರವಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕದ ಪ್ರತಿನಿಧಿಯಾಗಿದ್ದಾರೆ ಎಂದರು. ಅಶೋಕ್ ಅವರ ಆಯ್ಕೆ, ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರ ಸಮ್ಮುಖ ಮತ್ತು ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಆಗಿದೆ. ಘೋಷಣೆ ಮಾಡುವ ಮೊದಲು ವೀಕ್ಷಕರು ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದರು ಎಂದು ಸಿಟಿ ರವಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ