‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬಾ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ
ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದ ಸೆಲೆಬ್ರಿಟಿ ಶೋ ನಡೆದಿದೆ. ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಆರ್. ಚಂದ್ರು, ಪ್ರಮೋದ್ ಶೆಟ್ಟಿ, ಉಪೇಂದ್ರ, ತರುಣ್ ಸುಧೀರ್, ಪಿ. ರವಿಶಂಕರ್ ಮುಂತಾದವರು ಸೆಲೆಬ್ರಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆರ್. ಚಂದ್ರು ಅವರು ವಿಮರ್ಶೆ ಹಂಚಿಕೊಂಡಿದ್ದಾರೆ.
‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ನಡೆದಿದೆ. ಚಿತ್ರ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಆರ್. ಚಂದ್ರು, ಪ್ರಮೋದ್ ಶೆಟ್ಟಿ, ಉಪೇಂದ್ರ, ತರುಣ್ ಸುಧೀರ್, ಮಿಲನಾ ನಾಗರಾಜ್, ಮಾನ್ವಿತಾ ಹರೀಶ್, ಪಿ. ರವಿಶಂಕರ್, ಎಸ್. ಮಹೇಂದರ್ ಮುಂತಾದವರು ಸೆಲೆಬ್ರಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆರ್. ಚಂದ್ರು ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಈ ರೀತಿಯ ಸಿನಿಮಾ ಮಾಡೋಕೆ ತುಂಬಾ ಗುಂಡಿಗೆ ಬೇಕು. ಅಷ್ಟು ದೊಡ್ಡ ದೃಶ್ಯಕಾವ್ಯವನ್ನು ಕಟ್ಟಿಕೊಡುವುದು ಸುಲಭ ಅಲ್ಲ. ಅದಕ್ಕೆ ಎಷ್ಟು ಶ್ರಮ ಇದೆ ಅಂತ ನನಗೆ ಗೊತ್ತಿದೆ. ಇದು ನಮ್ಮ ಕನ್ನಡದ ಹೆಮ್ಮೆ. ಎಲ್ಲರೂ ಬಂದು ಸಿನಿಮಾ ನೋಡಬೇಕು. ಈ ರೀತಿ ಸಿನಿಮಾ ಮಾಡೋಕೆ ತುಂಬಾ ತಾಕತ್ತು ಬೇಕು. ಪಾರ್ಟ್ 2 ನೋಡಲು ಕಾಯುತ್ತಿದ್ದೇನೆ’ ಎಂದು ಆರ್. ಚಂದ್ರು (R Chandru) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್

