ಹುಟ್ಟುಹಬ್ಬದ ನೆಪದಲ್ಲಿ ಮತದಾರರಿಗೆ ಭರ್ಜರಿ ಮಾಂಸದೂಟ: ತಿಂದಿದ್ದು ಸ್ವಲ್ಪ, ಚೆಲ್ಲಿದೇ ಹೆಚ್ಚು

Updated on: Mar 19, 2023 | 11:06 PM

ರಾಣೆಬೆನ್ನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿರುವ ಆರ್.ಶಂಕರ್ ತಮ್ಮ ಹುಟ್ಟುಹಬ್ಬದ ನೆಪದಲ್ಲಿ ಕ್ಷೇತ್ರದ ಮತದಾರರಿಗೆ ಭರ್ಜರಿ ಮಾಂಸದೂಟ.

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿರುವ ಆರ್.ಶಂಕರ್ (R. Shankar) ತಮ್ಮ ಹುಟ್ಟುಹಬ್ಬದ ನೆಪದಲ್ಲಿ ಕ್ಷೇತ್ರದ ಮತದಾರರಿಗೆ ಭರ್ಜರಿ ಮಾಂಸದೂಟ ಆಯೋಜನೆ ಮಾಡಿದ್ದರು. 5 ಟನ್ ಚಿಕನ್, 261 ಕುರಿಗಳ ಮಾಂಸದೂಟ ಸೇರಿದಂತೆ ಮೊಟ್ಟೆ ಊಟ ಮಾಡಿಸಿದ್ದರು. ಆದರೆ ಜನರು ಮಾತ್ರ ಅರ್ಧಂಬರ್ಧ ಊಟ ಮಾಡಿ, ಅಡಿಕೆ ತಟ್ಟೆಗಳನ್ನ ಎಲ್ಲೆಂದರಲ್ಲಿ ಬಿಟ್ಟು ಹೋಗಿದ್ದಾರೆ. ಔತಣಕೂಟ ಆಯೋಜನೆ ಮೂಲಕ ಮತದಾರರ ಓಲೈಕೆಗೆ ಆರ್.ಶಂಕರ್ ನಾನಾ ಕಸರತ್ತು ನಡೆಸುತ್ತಿದ್ದಾರೆ.  ಈಗಾಗಲೇ ಶಾಲಾ ಮಕ್ಕಳಿಗೆ ಬ್ಯಾಗ್, ಗೃಹಿಣಿಯರಿಗೆ ಸೀರೆ, ಕುಕ್ಕರ್ ಹಂಚಿಕೆ ಮಾಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 19, 2023 11:06 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More