‘ನನ್ನ ಇಡೀ ಫ್ಯಾಮಿಲಿ ಮೇಲೆ ದರ್ಶನ್ ಋಣ ಇದೆ’: ಜೈಲಿನ ಎದುರು ರಚಿತಾ ಭಾವುಕ ಮಾತು

|

Updated on: Aug 22, 2024 | 6:00 PM

ಇಂದು ರಚಿತಾ ರಾಮ್​ ಅವರು ಬಣ್ಣದ ಲೋಕದಲ್ಲಿ ಯಶಸ್ಸು ಗಳಿಸಿದ್ದಾರೆ. ಅದಕ್ಕೆಲ್ಲ ಮೂಲ ಕಾರಣ ಆಗಿದ್ದೇ ದರ್ಶನ್ ನೀಡಿದ್ದ ಅವಕಾಶ. ಅದನ್ನು ಈಗ ರಚಿತಾ ನೆನಪಿಸಿಕೊಂಡಿದ್ದಾರೆ. ಕೊಲೆ ಆರೋಪದಲ್ಲಿ ಜೈಲುಪಾಲಾಗಿರುವ ದರ್ಶನ್​ ಅವರನ್ನು ರಚಿತಾ ರಾಮ್​ ಭೇಟಿ ಮಾಡಿ ಬಂದಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಮಾತನಾಡುತ್ತಾ ಭಾವುಕರಾಗಿದ್ದಾರೆ.

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರದಲ್ಲಿ ಭೇಟಿಯಾಗಿ ಬಂದಿರುವ ರಚಿತಾ ರಾಮ್​ ಅವರು ಎಮೋಷನಲ್​ ಆಗಿ ಮಾತನಾಡಿದ್ದಾರೆ. ಯಾಕೆ ಭಾವುಕರಾಗಿದ್ದೀರಿ ಎಂದು ಕೇಳಿದ್ದಕ್ಕೆ ತಮ್ಮ ಆರಂಭದ ದಿನಗಳನ್ನು ರಚಿತಾ ಅವರು ನೆನಪಿಸಿಕೊಂಡಿದ್ದಾರೆ. ‘ಎಮೋಷನಲ್​ ಆಗದೇ ಇನ್ನೇನು ಮಾಡಲಿ? ನಾನೊಂದು ಮಾತು ಹೇಳುತ್ತೇನೆ. ನಾನು ದರ್ಶನ್​ ಅವರ ಬ್ಯಾನರ್​ನಿಂದ ಬಂದವಳು. ನನ್ನನ್ನು ಪರಿಚಯಿಸಿದ್ದೇ ದರ್ಶನ್​ ಸರ್. ನನಗೆ ಇಂದು ಏನೇ ಹೆಸರು ಇದ್ದರೂ ದರ್ಶನ್​ ಅವರಿಂದ. ಅಂದು ಅವರು ಒಂದು ಮಾತು ನೋ ಎಂದಿದ್ದರೆ ಬಿಂದ್ಯಾ ರಾಮ್​ ಆಗಿದ್ದ ನಾನು ರಚಿತಾ ರಾಮ್​ ಆಗೋಕೆ ಆಗುತ್ತಿರಲಿಲ್ಲ. ಅವರ ಋಣ ನನ್ನ ಮೇಲೆ ಹಾಗೂ ನನ್ನ ಇಡೀ ಕುಟುಂಬದ ಮೇಲಿದೆ. ಜೈಲಿನಲ್ಲಿ ಅವರೇ ನನಗೆ ಧೈರ್ಯ ತುಂಬಿದರು. ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on