AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮಿಂದ ಆದ ಅಗೌರವ ಏನು ಎಂಬುದನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು’; ನಾಗಶೇಖರ್ ಖಡಕ್ ಮಾತು

‘ನಮ್ಮಿಂದ ಆದ ಅಗೌರವ ಏನು ಎಂಬುದನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು’; ನಾಗಶೇಖರ್ ಖಡಕ್ ಮಾತು

ರಾಜೇಶ್ ದುಗ್ಗುಮನೆ
|

Updated on:Jun 18, 2025 | 2:23 PM

Share

ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಪ್ರಚಾರಕ್ಕೆ ಬರದೇ ಇರೋದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕ ನಾಗಶೇಖರ್ ಅವರು ಅಸಮಧಾನ ಹೊರಹಾಕಿದ್ದು, ದೂರು ನೀಡಿದ್ದರೆ. ಈಗ ಅವರು ಘಟನೆ ಬಗ್ಗೆ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.  

‘ಸಂಜು ವೆಡ್ಸ್ ಗೀತಾ 2’ (Sanju Weds Geetha) ಸಿನಿಮಾಗೆ ಶ್ರೀನಗರ ಕಿಟ್ಟಿ ಹೀರೋ ಹಾಗೂ ರಚಿತಾ ರಾಮ್ ನಾಯಕಿ. ಆದರೆ, ಸಿನಿಮಾ ಪ್ರಚಾರಕ್ಕೆ ರಚಿತಾ ಬಂದಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ನಾಗಶೇಖರ್ ಫಿಲ್ಮ್​ ಚೇಂಬರ್​ಗೆ ದೂರು ನೀಡಿದ್ದಾರೆ. ಆ ಬಳಿಕ ಮಾತನಾಡಿರುವ ಅವರು,  ‘ನಾನು ಬಹಳ ಗೌರವದಿಂದ ಕಲಾವಿದರನ್ನು ನೋಡಿಕೊಳ್ಳುತ್ತೇವೆ. ರಚಿತಾ ರಾಮ್​ ಮ್ಯಾನೇಜರ್​ಗೆ ನಾನು ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದೇನೆ. ಎರಡು ದಿನ ಬರದೇ ಇದ್ದಿದ್ದಕ್ಕೆ ಎರಡು ವರ್ಷಗಳ ಸಂಬಂಧ ಹಾಳಾಗೋದು ನನಗೆ ಇಷ್ಟ ಇಲ್ಲ ಎಂದು ಹೇಳಿದ್ದೇನೆ. ಮೆಸೇಜ್ ಕಳುಹಿಸಿದ್ದೇನೆ. ಜನವರಿ 8ರವರೆಗೆ ಅವರು ಸರಿಯಾಗಿ ರೆಸ್ಪಾನ್ಸ್ ಮಾಡಿದರು. ಆ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಯಾವ ಕಲಾವಿದರೂ ಹೀಗೆ ಮಾಡಬಾರದು. ನಮ್ಮಿಂದ ಆದ ಅಗೌರವ ಏನು ಎಂಬುದನ್ನು ರಚಿತಾ ಸ್ಪಷ್ಟಪಡಿಸಬೇಕು’ ಎಂದು ನಾಗಶೇಖರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 18, 2025 12:24 PM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More