ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ ರಾಮ್
ನಟಿ ರಚಿತಾ ರಾಮ್ ಅವರಿಗೆ ದುಡ್ಡು ಎಲ್ಲಿಂದ ಬರುತ್ತಿದೆ ಎಂಬ ಪ್ರಶ್ನೆ ಕೆಲವರಿಗೆ ಇದೆ. ಆ ಬಗ್ಗೆ ರಚಿತಾ ನೇರವಾಗಿ ಉತ್ತರ ನೀಡಿದ್ದಾರೆ. ‘ಅಯೋಗ್ಯ 2’, ‘ಸಂಜು ವೆಡ್ಸ್ ಗೀತಾ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಟಿವಿ9 ಜೊತೆ ಮಾತನಾಡಿದ ರಚಿತಾ ರಾಮ್ ಅವರು ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ರಚಿತಾ ರಾಮ್ ಅವರು ನಟಿಸಿದ್ದಾರೆ. ಸೀರಿಯಲ್ನಿಂದ ಬಂದು ಸಿನಿಮಾದಲ್ಲಿ ಮಿಂಚಿದ ರಚಿತಾ ಅವರಿಗೆ ಕೈತುಂಬ ಸಂಭಾವನೆ ಸಿಗುತ್ತಿದೆ. ಆದರೆ ಯಾವು ಯಾರಿಂದಲೂ ಸ್ಪಾನ್ಸರ್ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ. ‘ಒಂದು ವೇಳೆ ಕಷ್ಟ ಬಂದು ಎಲ್ಲವನ್ನೂ ಕಳೆದುಕೊಂಡರೆ ದೇವಸ್ಥಾನದಲ್ಲಿ ಕೆಲಸ ಮಾಡಿ ಪ್ರಸಾದ ತಿಂದು ಬದುಕುತ್ತೇನೆ. ಯಾರ ಜೊತೆಗೂ ಹೋಗಿ ನಾನು ಇರುವುದಿಲ್ಲ. ಇದು ನನಗೆ ಅಪ್ಪ-ಅಮ್ಮ ಹೇಳಿಕೊಟ್ಟಿರುವುದು’ ಎಂದು ರಚಿತಾ ರಾಮ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us