‘ಕಾವೇರಿಗೆ ನಾನು ಜೀವ ಕೊಡ್ತೀನಿ’: ವಾಣಿಜ್ಯ ಮಂಡಳಿ ಚುನಾವಣೆ ವೇಳೆ ರಾಘವೇಂದ್ರ ರಾಜ್​ಕುಮಾರ್​ ಹೇಳಿಕೆ

‘ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿ ಇರುತ್ತೇವೆ. ನನ್ನ ಈ ಜೀವ 10 ವರ್ಷದಿಂದ ಕಷ್ಟಪಟ್ಟುಕೊಂಡು ಬದುಕುತ್ತಿದೆ. ಜೀವ ಕೊಡುವುದರಿಂದ ಕಾವೇರಿಗೆ ಒಳ್ಳೆಯದು ಆಗುತ್ತೆ ಎಂದರೆ ನನ್ನ ಜೀವ ಕೊಡಲು ನಾನು ಮತ್ತು ನಮ್ಮ ಕುಟುಂಬ ಸಿದ್ಧ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಕಾವೇರಿಗೆ ನಾನು ಜೀವ ಕೊಡ್ತೀನಿ’: ವಾಣಿಜ್ಯ ಮಂಡಳಿ ಚುನಾವಣೆ ವೇಳೆ ರಾಘವೇಂದ್ರ ರಾಜ್​ಕುಮಾರ್​ ಹೇಳಿಕೆ
| Updated By: ಮದನ್​ ಕುಮಾರ್​

Updated on: Sep 23, 2023 | 6:18 PM

ಕಾವೇರಿ ನೀರು (Cauvery Water) ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಬಿಕ್ಕಟ್ಟು ಉಂಟಾಗಿದೆ. ಕರುನಾಡಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವೇಳೆ ಚಿತ್ರೋದ್ಯಮದಿಂದಲೂ ಪ್ರತಿಭಟನೆಗೆ ಬೆಂಬಲ ವ್ಯಕ್ತವಾಗಿದೆ. ನೀರಿಗಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಭಾಗಿಯಾಗಲು ತಾವು ಸಿದ್ದ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಇಂದು (ಸೆಪ್ಟೆಂಬರ್​ 23) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ನಮ್ಮ ಜನರಿಗೆ ತೊಂದರೆ ಆದಾಗ ನಮ್ಮ ಚಿತ್ರರಂಗ ಮತ್ತು ಕುಟುಂಬ ಯಾವಾಗಲೂ ಮುಂದೆ ಬರುತ್ತದೆ. ಎಲೆಕ್ಷನ್​ ಬಳಿಕ ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿ ಇರುತ್ತೇವೆ. ನನ್ನ ಈ ಜೀವ 10 ವರ್ಷದಿಂದ ಕಷ್ಟಪಟ್ಟುಕೊಂಡು ಬದುಕುತ್ತಿದೆ. ಜೀವ ಕೊಡುವುದರಿಂದ ಕಾವೇರಿಗೆ ಒಳ್ಳೆಯದು ಆಗುತ್ತೆ ಎಂದರೆ ನನ್ನ ಜೀವ ಕೊಡಲು ನಾನು ಮತ್ತು ನಮ್ಮ ಕುಟುಂಬ ಸಿದ್ಧ’ ಎಂದು ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us