ರಾಘವೇಂದ್ರ ರಾಜ್​ಕುಮಾರ್​-ಶ್ರುತಿ ಹೊಸ ಚಿತ್ರ ‘13’; ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ ಮುಹೂರ್ತ

| Updated By: ಮದನ್​ ಕುಮಾರ್​

Updated on: Apr 09, 2022 | 2:14 PM

‘13’ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಗುಜುರಿ ಅಂಗಡಿಯ ಮಾಲಿಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನರೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ವಿಶೇಷ ಪಾತ್ರಗಳ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಅವರು ಅಭಿನಯಿಸಲಿರುವ ಹೊಸ ಸಿನಿಮಾ ಇಂದು (ಏ.9) ಸೆಟ್ಟೇರಿದೆ. ಈ ಚಿತ್ರಕ್ಕೆ ‘13’ ಎಂದು ಶೀರ್ಷಿಕೆ ಇಡಲಾಗಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ‘13’ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಗುಜುರಿ ಅಂಗಡಿಯ ಮಾಲಿಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಮುಸ್ಲಿಂ ಮಹಿಳೆಯಾಗಿ ಶ್ರುತಿ (Shruthi) ಬಣ್ಣ ಹಚ್ಚುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘13’ ಸಿನಿಮಾ (13 Kannada Movie) ನಿರೀಕ್ಷೆ ಮೂಡಿಸಿದೆ. ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಡಾ. ರಾಜ್​ಕುಮಾರ್​ ಕುಟುಂಬಕ್ಕೆ ತೀವ್ರ ನೋವಾಗಿದೆ. ಆ ನೋವಿನ ನಡುವೆಯೂ ಬದುಕು ಸಾಗಬೇಕಿರುವುದು ಅನಿವಾರ್ಯ. ಆ ನಿಟ್ಟಿನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಪುನಃ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ. ‘13’ ಸಿನಿಮಾಗೆ ನರೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ:

ವೀರೇಶ್​ ಚಿತ್ರಮಂದಿರದಲ್ಲಿ ‘ಜೇಮ್ಸ್​’ ಚಿತ್ರ ನೋಡಲು ಬಂದ ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದೇನು?

‘ಅಪ್ಪು ದೇಹಬಿಟ್ಟು ಹೋಗಿರಬಹುದು, ಆದರೆ ನಮ್ಮ ಮನಸ್ಸನ್ನು ಬಿಟ್ಟುಹೋಗಲು ಸಾಧ್ಯವಿಲ್ಲ’: ರಾಘಣ್ಣ

Follow us on