AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ಮದನ್​ ಕುಮಾರ್​
|

Updated on: Apr 24, 2025 | 10:43 PM

ಡಾ. ರಾಜ್​ಕುಮಾರ್ ಅವರ ಜನ್ಮದಿನದ ಪ್ರಯುಕ್ತ ರಾಘವೇಂದ್ರ ರಾಜ್​ಕುಮಾರ್​ ಅವರು ಅಣ್ಣಾವ್ರ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಪ್ರಸ್ತುತ ಕನ್ನಡ ಚಿತ್ರರಂಗದ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಜನರು ಚಿತ್ರಮಂದಿರಕ್ಕೆ ಬರುವುದು ಕಡಿಮೆ ಆಗಿದೆ. ಉತ್ತಮವಾದ ಸಿನಿಮಾಗಳು ರಿಲೀಸ್ ಆದಾಗಲೂ ಜನರು ಥಿಯೇಟರ್​ (Theatre) ಕಡೆಗೆ ಮುಖ ಮಾಡುತ್ತಿಲ್ಲ. ಇದರಿಂದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಬೇಸರ ಆಗುತ್ತದೆ. ಇಂಥ ಪರಿಸ್ಥಿತಿ ಬಂದಿದ್ದರ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ. ‘ಒಮ್ಮೊಮ್ಮೆ ಈ ರೀತಿ ಆಗುತ್ತದೆ. ಆ ಕಾಲದಿಂದಲೂ ಹಾಗೆ ಆಗುತ್ತಿದೆ. ಅದು ಸಡನ್ ಆಗಿ ಸರಿ ಆಗುತ್ತದೆ. ಒಳ್ಳೆಯ ಸಿನಿಮಾಗಳು ಬರುತ್ತವೆ. ಚೆನ್ನಾಗಿ ಪ್ರದರ್ಶನ ಕಾಣುತ್ತವೆ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.