ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ

Updated on: Jan 26, 2025 | 3:15 PM

‘ಶಿವರಾಜ್​ಕುಮಾರ್​ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗುವಾಗ ದುಃಖದಲ್ಲಿ ಕಳಿಸಿಕೊಟ್ಟೆವು. ಇಂದು ಯಶಸ್ವಿ ಚಿಕಿತ್ಸೆ ಮುಗಿಸಿಕೊಂಡು ವಾಪಸ್ ಬಂದಿದ್ದಾನೆ. ಒಬ್ಬ ಮಗನಿಗೆ ತಂದೆಯನ್ನು ನೋಡಿದಾಗ ಎಷ್ಟು ಖುಷಿ ಆಗತ್ತೋ ಅಷ್ಟೇ ಖುಷಿ ನನಗೆ ಆಗಿದೆ. ಅಭಿಮಾನಿಗಳ ಪೂಜೆಯೇ ಅವನನ್ನು ವಾಪಸ್ ಕರೆದುಕೊಂಡಿದೆ’ ಎಂದು ನಟ ರಾಘವೇಂದ್ರ ರಾಜ್​​ಕುಮಾರ್​ ಅವರು ಹೇಳಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರು ಅಮೆರಿಕದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಈ ಖುಷಿಯಲ್ಲಿ ಸಹೋದರ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘ನಮ್ಮ ತಂದೆ ಕಿಡ್ನಾಪ್ ಆಗಿ ಬಿಡುಗಡೆ ಆದಾಗ ಒಂದು ರೀತಿ ಸಂತೋಷ ಆಗಿತ್ತು. ನನಗೆ ಈ ದಿನ ಅದೇ ರೀತಿ ಫೀಲ್ ಆಗುತ್ತಿದೆ’ ಎಂದು ರಾಘಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More