Karnataka Assembly Election 2023: ‘ನನ್ನ ಕೆಲಸ ನಾನು ಮಾಡಿದ್ದೇನೆ, ನಿಮ್ಮ ಕೆಲಸ ನೀವು ಮಾಡಿ’; ಮತದಾನದ ಬಳಿಕ ಮಾತನಾಡಿದ ರಾಘಣ್ಣ

Raghavendra Rajkumar: ಬೆಂಗಳೂರಿನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಮತದಾನ ಮಾಡಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್​ಕುಮಾರ್​ ಅವರನ್ನು ಮಿಸ್​ ಮಾಡಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಮತದಾನ ಪ್ರಕ್ರಿಯೆ ಚುರುಕಾಗಿದೆ. ಬೆಳಗ್ಗೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಅವರು ಪ್ರೇರಣೆ ನೀಡಿದ್ದಾರೆ. ‘ನನ್ನ ಕೆಲಸ ನಾನು ಮಾಡಿದ್ದೇನೆ. ನಿಮ್ಮ ಕೆಲಸ ನೀವು ಮಾಡಿ. ಬೂತ್​ಗಳ ಸಂಖ್ಯೆ ಜಾಸ್ತಿ ಮಾಡಿದ್ದಾರೆ. ಲೈನ್​ ಜಾಸ್ತಿ ಇರಲ್ಲ. ಎಲ್ಲರೂ ಬಂದು ವೋಟ್​ ಮಾಡಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ರಾಘಣ್ಣ ಮಿಸ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us