ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಪೈಕಿ ಕಿರಿಯವರು ಪುನೀತ್. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆದರೆ, ದೇವರು ಮೊದಲು ಕರೆದುಕೊಂಡಿದ್ದು ಪುನೀತ್ ಅವರನ್ನು. ಮನೆಯ ಕಿರಿಯ ಮಗ ಮೊದಲು ಹೋದನಲ್ಲ ಎನ್ನುವ ಕೊರಗು ಹಾಗೂ ದುಃಖ ರಾಜ್ಕುಮಾರ್ ಕುಟುಂಬವನ್ನು ಬಿಟ್ಟೂಬಿಡದೆ ಕಾಡುತ್ತಿದೆ. ಇನ್ನೂ ಸಾಧನೆ ಮಾಡುತ್ತಿರುವ ವಯಸ್ಸಿನಲ್ಲೇ ಅವರು ನಿಧನ ಹೊಂದಿದ್ದು ನಿಜಕ್ಕೂ ಬೇಸರದ ಸಂಗತಿ. ಆದರೆ, ಈ ನೋವಿನ ಜತೆ ಕುಟುಂಬ ಜೀವನ ನಡೆಸಿಕೊಂಡು ಹೋಗಬೇಕಿದೆ. ಇದೇ ಮಾತನ್ನು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.
ಪುನೀತ್ ಅವರನ್ನು ಮಣ್ಣು ಮಾಡಿ ಇಂದಿಗೆ (ನವೆಂಬರ್ 2) ಮೂರನೇ ದಿನ. ಹೀಗಾಗಿ, ಪುನೀತ್ ಕುಟುಂಬದವರು ಕಂಠೀರವ ಸ್ಟುಡಿಯೋಗೆ ಬಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಹಾಕಿ ಬಂದಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಾತನಾಡಿದ ಅವರು ‘ಈ ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ’ ಎಂದಿದ್ದಾರೆ.
ಇದನ್ನೂ ಓದಿ: Puneeth Rajkumar: ಅಗಲಿದ ಪುನೀತ್ಗೆ ಕುಟುಂಬಸ್ಥರಿಂದ ಹಾಲು- ತುಪ್ಪ ಕಾರ್ಯ; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ