‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಪ್ರತಿಕ್ರಿಯೆ

Updated on: Aug 22, 2025 | 9:31 PM

ನಟ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ’ ಎಂದು ರಾಗಿಣಿ ಹೇಳಿದ್ದಾರೆ.

ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಈ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ (Ragini Dwivedi) ಕೂಡ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ಕಾನೂನು ಪ್ರಕ್ರಿಯೆಗೆ ಹೆಚ್ಚು ಸಮಯ ಹಿಡಿಯಬಹುದು. ಆದರೆ ಖಂಡಿತಾ ನ್ಯಾಯ ಗೆಲ್ಲುತ್ತದೆ. ನಟಿಯರಿಗೆ ಅಶ್ಲೀಲ ಸಂದೇಶ ಬರುತ್ತಿರುವುದು ದುರದೃಷ್ಟಕರ. ಯಾವಾಗಲೂ ಹೆಣ್ಮಕ್ಕಳ ಚಾರಿತ್ರ್ಯಹರಣ ಮಾಡುವಂತಹ ಕೆಲಸ ನಡೆಯತ್ತಲೇ. ಮಹಿಳೆಯರನ್ನು ಸುಲಭವಾಗಿ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More