ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗ ಸಭೆ ನಡೆಯಲಿಲ್ಲ, ಹಾಗಾಗಿ ದೆಹಲಿಗೆ ಕರೆದಿದ್ದಾರೆ: ಬಿಜೆಡ್ ಜಮೀರ್ ಅಹ್ಮದ್ ಖಾನ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Aug 02, 2023 | 11:09 AM

ಲೋಕ ಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆಯೇ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದರೂ, ಗೊತ್ತಿಲ್ಲ ಸ್ವಾಮಿ ಅಂತ ಸಚಿವ ಜಮೀರ್ ಅಹ್ಮದ್ ಹೇಳಿದರು.

ದೆಹಲಿ: ರಾಜ್ಯ ಸಚಿವ ಸಂಪುಟದ ಎಲ್ಲ ಸಚಿವರನ್ನು ಮತ್ತು ಕೆಲ ಶಾಸಕರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆದಿದೆ. ಎಲ್ಲ ಮಂತ್ರಿಗಳಿಗೆ ದೆಹಲಿಯಿಂದ ಬುಲಾವ್ ಬಂದಿರೋದಷ್ಟೇ ಗೊತ್ತು, ಕರೆ ಹಿಂದಿನ ಕಾರಣವೇನು ಅಂತ ಮಾತ್ರ ಗೊತ್ತಿಲ್ಲ. ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಇಂದು ಬೆಳಗ್ಗೆ ದೆಹಲಿಗೆ ಪಯಣಿಸುವ ಮೊದಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಮೊನ್ನೆ ರಾಹುಲ್ ಗಾಂಧಿ (Rahul Gandhi) ಬೆಂಗಳೂರಿಗೆ ಬಂದಾಗಲೇ ಒಂದು ಸಭೆ ನಡೆಯಬೇಕಿತ್ತು, ಕಾರಣಾಂತರಗಳಿಂದ ಅದು ನಡೆಯಲಿಲ್ಲ ಹಾಗಾಗೇ, ದೆಹಲಿಗೆ ಕರೆದಿದ್ದಾರೆ ಎಂದು ಹೇಳಿದರು. ಸಚಿವರು ಮತ್ತು ಶಾಸಕರ ನಡುವೆ ಅಸಮಾಧಾನ ಇದೆಯೇ? ಎಂಥದ್ದೂ ಇಲ್ಲ ಎಂದು ಸಚಿವ ಹೇಳಿದರು. ಲೋಕ ಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆಯೇ ಅಂತ ಕೇಳಿದರೆ, ಗೊತ್ತಿಲ್ಲ ಸ್ವಾಮಿ ಅಂತ ಜಮೀರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.