ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ: ರಾಹುಲ್ ವ್ಯಂಗ್ಯ

Updated on: Aug 13, 2025 | 9:07 PM

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗದ ವಿರುದ್ಧದ ತಮ್ಮ ರಣಕಹಳೆ ಮುಂದುವರೆಸಿದ್ದಾರೆ. ಇನ್ನು ಬಿಹಾರ ಮೂಲದ ಏಳು ಮತದಾರರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಈ ವೇಳೆ ತಮ್ಮನ್ನು ಮೃತಪಟ್ಟಿದ್ದಾರೆಂದು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ನವದೆಹಲಿ, (ಆಗಸ್ಟ್ 13): ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗದ ವಿರುದ್ಧದ ತಮ್ಮ ರಣಕಹಳೆ ಮುಂದುವರೆಸಿದ್ದಾರೆ. ಇನ್ನು ಬಿಹಾರ ಮೂಲದ ಏಳು ಮತದಾರರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಈ ವೇಳೆ ತಮ್ಮನ್ನು ಮೃತಪಟ್ಟಿದ್ದಾರೆಂದು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನು ರಾಹುಲ್ ಗಾಂಧಿ ತಮ್ಮ ಎಕ್ಸ್​​ ಖಾತೆಯಲ್ಲಿ ವಿಡಿಯೋ ಹಾಕಿಕೊಂಡಿದ್ದು.ನನಗೆ ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳಾಗಿವೆ. ಆದ್ರೆ, ಸತ್ತವರ ಜೊತೆ ಟೀ ಕುಡಿಯುವ ಅನುಭವವಾಗಿರಲಿಲ್ಲ. ಈ ವಿಶೇಷ ಘಟನೆಗೆ ಕಾರಣವಾದ ಚುನಾವಣಾ ಆಯೋಗಕ್ಕೆ ಧನ್ಯವಾದ ಎಂದು ಟಾಂಕ್ ಕೊಟ್ಟಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More