ಓದುವ ಅದಮ್ಯ ಆಸೆಯಿದ್ದರೂ ಹೊಟ್ಟೆಪಾಡಿಗಾಗಿ ಚಿಂದಿ ಆಯುತ್ತಿರುವ ರಾಯಚೂರು ಪೋರನಿಗೆ ಸರ್ಕಾರದ ನೆರವು ಸಿಕ್ಕೀತೇ?

ಜೀತಪದ್ಧತಿ, ಬಾಲ ಕಾರ್ಮಿಕ ಪಿಡುಗು ಯಾವತ್ತೋ ಕೊನೆಗಾಣಿಸಿದ್ದೇವೆ ಅಂತ ಬಡಾಯಿ ಕೊಚ್ಚಿಕೊಳ್ಳುವ ನಮ್ಮ ಸರ್ಕಾರಗಳು ಸಂತೋಷ್ ಕತೆಯನ್ನು ಕೇಳಬೇಕು. ಅವನಿಗೆ ಓದುವ ಅಸೆಯಿದೆ, ನಮ್ಮ ಶಿಕ್ಷಣ ಮಂತ್ರಿಗಳು ಹೇರ್ ಕಟ್ ಬಗ್ಗೆ ಮಾತಾಡುತ್ತಾ ಕಾಲಹರಣ ಮಾಡುವ ಬದಲು ಸಂತೋಷ್ ಓದಿಗೆ ನೆರವಾದರೆ ಚೆನ್ನಾಗಿರುತ್ತದೆ.

ಓದುವ ಅದಮ್ಯ ಆಸೆಯಿದ್ದರೂ ಹೊಟ್ಟೆಪಾಡಿಗಾಗಿ ಚಿಂದಿ ಆಯುತ್ತಿರುವ ರಾಯಚೂರು ಪೋರನಿಗೆ ಸರ್ಕಾರದ ನೆರವು ಸಿಕ್ಕೀತೇ?
|

Updated on: May 30, 2024 | 10:42 AM

ರಾಯಚೂರು: ರಾಷ್ಡ್ರಪ್ರೇಮ, ದೇಶಭಕ್ತಿ (patriotism) ಬಗ್ಗೆ ಹಗಲಿಡೀ ಭಾಷಣಗಳನ್ನು ಬಿಗಿಯುವ ನಮ್ಮ ರಾಜಕಾರಣಿಗಳು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮೊಸರ್ಕಲ್ ಗ್ರಾಮದ (Mosarkal village) ಈ ಹುಡುಗನಿಂದ ರಾಷ್ಟ್ರಕ್ಕೆ ಗೌರವ ಸಲ್ಲಿಸುವ ಪಾಠ ಹೇಳಿಸಿಕೊಳ್ಳಬೇಕು. ತನ್ನೂರಲ್ಲಿ ಬೀದಿ ಬೀದಿ ಸುತ್ತುತ್ತಾ ಚಿಂದಿ ಆಯುವ ಸಂತೋಷ್ (Santosh) ಹೆಸರಿನ ಬಾಲಕ ತನ್ನಲ್ಲಿರುವ ರಾಷ್ಟ್ರಪ್ರೇಮ ಪ್ರದರ್ಶಿಸಲು ಮಾಡಿದ್ದೇನು ಗೊತ್ತಾ? ಶಾಲೆಯೊಂದರ ಬಳಿ ಇವನು ಚಿಂದಿ ಆಯುತ್ತಿದ್ದಾಗ ಶಾಲೆಯ ಮಕ್ಕಳು ರಾಷ್ಟ್ರಗೀತೆ ಹಾಡುವುದು ಕಿವಿಗೆ ಬಿದ್ದಿದೆ. ಕೂಡಲೇ ಸಂತೋಷ್ ತನ್ನ ಕೆಲಸ ಬಿಟ್ಟು ರಾಷ್ಟ್ರಗೀತೆ ಹಾಡೋದು ಮುಗಿಯುವರೆಗೆ ಸಾವಧಾನ್ ಸ್ಥಿತಿಯಲ್ಲಿ ನಿಂತುಕೊಂಡಿದ್ದಾನೆ. ನಮ್ಮ ರಾಯಚೂರು ವರದಿಗಾರ ಸಂತೋಷ್ ನೊಂದಿಗೆ ಮಾತಾಡಿದ್ದು, ಮನೆಯಲ್ಲಿ ಕಡು ಬಡತನದ ಕಾರಣ ಅವನು 5ನೇ ತರಗತಿಯವರೆಗೆ ಓದಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾನೆ. ತನ್ನ ತಾಯಿಗೆ ಆರ್ಥಿಕವಾಗಿ ನೆರವಾಗಲು ಹತ್ತೆನ್ನೆರಡು ವರ್ಷದ ಪೋರ ಓದುವ ಅದಮ್ಯ ಆಸೆ ಮನದಲ್ಲಿ ಹುದುಗಿದ್ದರೂ ಚಿಂದಿ ಆಯುತ್ತಾ ರಸ್ತೆಗಳಲ್ಲಿ ಅಲೆಯುತ್ತಿದ್ದಾನೆ. ಜೀತಪದ್ಧತಿ, ಬಾಲ ಕಾರ್ಮಿಕ ಪಿಡುಗು ಯಾವತ್ತೋ ಕೊನೆಗಾಣಿಸಿದ್ದೇವೆ ಅಂತ ಬಡಾಯಿ ಕೊಚ್ಚಿಕೊಳ್ಳುವ ನಮ್ಮ ಸರ್ಕಾರಗಳು ಸಂತೋಷ್ ಕತೆಯನ್ನು ಕೇಳಬೇಕು. ಅವನಿಗೆ ಓದುವ ಅಸೆಯಿದೆ, ನಮ್ಮ ಶಿಕ್ಷಣ ಮಂತ್ರಿಗಳು ಹೇರ್ ಕಟ್ ಬಗ್ಗೆ ಮಾತಾಡುತ್ತಾ ಕಾಲಹರಣ ಮಾಡುವ ಬದಲು ಸಂತೋಷ್ ಓದಿಗೆ ನೆರವಾದರೆ ಚೆನ್ನಾಗಿರುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮೈನವಿರೇಳುತ್ತದೆ ನಮ್ಮ ರಾಯಚೂರಿನ ಈ ಬಾಲಕನ ರಾಷ್ಟ್ರಭಕ್ತಿಯನ್ನು ನೋಡಿದರೆ! ವಿಡಿಯೋ ನೋಡಿ  

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್