AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​​ಲ್ಲಿ ಸಿಕ್ತು 2.5 ಲಕ್ಷ ರೂ ಹಣ: ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಬಸ್​​ಲ್ಲಿ ಸಿಕ್ತು 2.5 ಲಕ್ಷ ರೂ ಹಣ: ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಭೀಮೇಶ್​​ ಪೂಜಾರ್
| Edited By: |

Updated on: Jun 19, 2024 | 3:45 PM

Share

ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಸೋಮಶೇಖರ್​ ಎನ್ನುವವರು ಹುಬ್ಬಳ್ಳಿ-ಹೈದರಾಬಾದ್ ಬಸ್​ನಲ್ಲಿ ಹಣದ ಬ್ಯಾಗ್ ಬಿಟ್ಟುಹೋಗಿದ್ದಾರೆ. 2.5 ಲಕ್ಷ ರೂ. ಇದ್ದ ಹಣದ ಬ್ಯಾಗ್​ನ್ನು ಬಸ್​ನಲ್ಲೇ ಬಿಟ್ಟು ಇಳಿದಿದ್ದರು. ಸದ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸೋಮಶೇಖರ್​ಗೆ ಹಸ್ತಾಂತರ ಮಾಡುವ ಮೂಲಕ ಕೆಎಸ್​ಆರ್​ಟಿಸಿ ನಿರ್ವಾಹಕ ಮತ್ತು ಚಾಲಕ ಹಿಂದಿರುಗಿಸುವ ಮೂಲಕ ಮಾನವೀಯತೆ ಮೇರೆದಿದ್ದಾರೆ.

ರಾಯಚೂರು, ಜೂನ್​ 19: ಬಸ್​ನಲ್ಲಿ ಬಿಟ್ಟು ಹೋಗಿದ್ದ 2.5 ಲಕ್ಷ ರೂ. ಹಣವನ್ನು (money) ಕೆಎಸ್​ಆರ್​ಟಿಸಿ (KSRTC) ನಿರ್ವಾಹಕ ಮತ್ತು ಚಾಲಕ ಹಿಂದಿರುಗಿಸುವ ಮೂಲಕ ಮಾನವೀಯತೆ ಮೇರೆದಿರುವಂತಹ ಘಟನೆ ರಾಯಚೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಕೆಎಸ್​ಆರ್​ಟಿಸಿ ಬಸ್ ಚಾಲಕ ಹನಮಂತ್​ ಹಾಗೂ ಕಂಡಕ್ಟರ್ ಮಂಜುನಾಥ್ ಪ್ರಾಮಾಣಿಕತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಸೋಮಶೇಖರ್​ ಎನ್ನುವವರು ಹುಬ್ಬಳ್ಳಿ-ಹೈದರಾಬಾದ್ ಬಸ್​ನಲ್ಲಿ ಹಣದ ಬ್ಯಾಗ್ ಬಿಟ್ಟುಹೋಗಿದ್ದಾರೆ. ನಿನ್ನೆ ಮಧ್ಯಾಹ್ನ ಮಾನ್ವಿಯಿಂದ ಇದೇ ಬಸ್​ನಲ್ಲಿ ರಾಯಚೂರಿಗೆ ಸೋಮಶೇಖರ್ ಆಗಮಿಸಿದ್ದರು. ಈ ವೇಳೆ 2.5 ಲಕ್ಷ ರೂ. ಇದ್ದ ಹಣದ ಬ್ಯಾಗ್​ನ್ನು ಬಸ್​ನಲ್ಲೇ ಬಿಟ್ಟು ಇಳಿದಿದ್ದಾರೆ. ಬಳಿಕ ಹೈದರಾಬಾದ್​ನಲ್ಲಿ ಲಗೇಜ್ ಕ್ಯಾರಿಯರ್ನಲ್ಲಿ ಬ್ಯಾಗ್ ಪರಿಶೀಲನೆ ವೇಳೆ ಹಣ ಪತ್ತೆ ಹಿನ್ನೆಲೆ ಬ್ಯಾಗ್​ನಲ್ಲಿದ್ದ ಬ್ಯಾಂಕ್ ಪಾಸ್​ಬುಕ್​ ತಪಾಸಣೆ ಮಾಡಲಾಗಿದೆ. ಆ ಬಳಿಕ ಅದರಲ್ಲಿದ್ದ ಫೋನ್ ನಂಬರ್ ಮೂಲಕ ಸೋಮಶೇಖರ್​ಗೆ ಕರೆ ಮಾಡಲಾಗಿದೆ. ಇಂದು ಮರಳಿ ಹೈದರಾಬಾದ್​ನಿಂದ ಆಗಮಿಸುವ ವೇಳೆ ರಾಯಚೂರಿನಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಸೋಮಶೇಖರ್​ಗೆ ಹಸ್ತಾಂತರ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More