ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು!
ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ರಾಯಚೂರು, ಜೂನ್ 14: ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ನಗರದ ಐಡಿಎಸ್ ಎಂಟಿ ಲೇಔಟ್ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಎಂಬುವರ ಮನೆ ಸೇರಿದಂತೆ ಹಲವೆಡೆ ಚರಂಡಿ ಮಿಶ್ರಿತ ಮಳೆನೀರು ನುಗ್ಗಿದ್ದು, ನಿವಾಸಿಗಳು ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

