Video: ತಾವೇ ಮಣ್ಣು ತರಿಸಿ ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸರು
ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ನಿರ್ವಹಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ PSI ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ
ರಾಯಚೂರು, ಅ.25: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳ ಸಮಸ್ಯೆಗೆ ರಾಯಚೂರು ಟ್ರಾಫಿಕ್ ಪೊಲೀಸರು (Raichur traffic police) ಶಾಶ್ವತ ಪರಿಹಾರ ಕಂಡುಕೊಂಡಿದ್ದಾರೆ. ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ಮಾಡಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಇದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಈ ರಸ್ತೆ ಗುಂಡಿಗಳು ಅಪಘಾತಗಳಿಗೆ ಕಾರಣವಾಗುತ್ತಿದ್ದವು, ಆದರೆ ಪೊಲೀಸರ ಈ ಕಾರ್ಯವು ಅಪಾಯಗಳನ್ನು ತಪ್ಪಿಸಿದೆ. ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಈ ಜನಪರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ನಿಯಂತ್ರಣದ ಜೊತೆಗೆ ನಾಗರಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಒತ್ತು ನೀಡಿದ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 25, 2025 05:58 PM
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

