ಉಕ್ಕಿಹರಿದ ತುಂಗಭದ್ರಾ ನದಿ, ರಾಯರಯ ತಪಸ್ಸು ಮಾಡಿದ್ದ ಕಟ್ಟೆ ಜಲಾವೃತ

Edited By:

Updated on: Jul 28, 2024 | 11:45 AM

ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನು ರಾಯರ ಜಪದ ಕಟ್ಟೆ ಮುಳುಗಡೆಯಾಗಿದೆ.

ರಾಯಚೂರು, (ಜುಲೈ 28) : ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಇನ್ನು ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತವಾಗಿದ್ದು, ರಾಯರ ಜಪದ ಕಟ್ಟೆ ಮುಳುಗಡೆಯಾಗಿದೆ. ಮಂತ್ರಾಲಯದಿಂದ ಸುಮಾರು 30 ಕಿಮಿ ದೂರದಲ್ಲಿರುವ ರಾಯಚೂರು ತಾಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತವಾಗಿದೆ. ಈ ಸ್ಥಳದಲ್ಲಿ ರಾಯರು 13 ವರ್ಷ ತಪಸ್ಸು ಮಾಡಿದ್ದರು ಎನ್ನಲಾಗಿದೆ. ಇನ್ನು ಇಲ್ಲೇ ಇರುವ ಶಿವಲಿಂಗ ಕೂಡ ಮುಳುಗಿದೆ.

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More