ರೈಲ್ವೇ ಹಳಿ ಮೇಲೆ ಕಾದು ನಿಂತ ಯಮ! ರೈಲ್ವೇ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ

Edited By: ಆಯೇಷಾ ಬಾನು

Updated on: Jun 10, 2024 | 11:38 AM

ಮೈಸೂರಿನಲ್ಲಿ ರೈಲ್ವೇ ಇಲಾಖೆ ವತಿಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಯಮನ ವೇಷ ಹಾಕಿದ್ದ ವ್ಯಕ್ತಿ ರೈಲ್ವೆ ಹಳಿಗಳ ಮೇಲೆ ಓಡಾಡುತ್ತ ಯಮ ರೈಲ್ವೆ ಹಳಿಗಳ ಮೇಲೆ ಕಾದು ಕುಳಿತಿರುತ್ತಾನೆ. ಹೀಗಾಗಿ ಹಳಿ ದಾಡುವಾಗ ಎಚ್ಚರದಿಂದಿರಿ, ಮೊಬೈಲ್ ಬಳಸಬೇಡಿ ಎಂಬ ಸಂದೇಶ ರವಾನಿಸಲಾಯಿತು.

ಮೈಸೂರು, ಜೂನ್.10: ಮೈಸೂರಿನ ಜಯನಗರ ರೈಲ್ವೆ ಗೇಟ್ ಬಳಿ ರೈಲ್ವೇ ಇಲಾಖೆಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೈಲು ಹಳಿ ಮೇಲೆ ನಿಂತು ಯಮ ಧರ್ಮ ವೇಷಧಾರಿಯಿಂದ ಜಾಗೃತಿ ಮೂಡಿಸಲಾಯಿತು. ನೈರುತ್ಯ ರೈಲ್ವೆ ಇಲಾಖೆಯಿಂದ ಲೆವೆಲ್ ಕ್ರಾಸಿಂಗ್ ಜಾಗೃತಿ ಕಾರ್ಯಕ್ರಮ ನಡೆಯಿತು. ಯಮನ ವೇಷಧಾರಿ, ಸ್ಕೌಟ್ಸ್ ವಿಧ್ಯಾರ್ಥಿಗಳು ಅಣುಕು ಪ್ರದರ್ಶನ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು. ರೈಲ್ವೆ ಹಳಿ ದಾಡುವಾಗ ಎಚ್ಚರ ವಹಿಸುವಂತೆ ತಿಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More