ಮೈಸೂರಿನ ಹಲವೆಡೆ ಆಲಿಕಲ್ಲು ಮಳೆ: ವರ್ಷದ ಮೊದಲ ಮಳೆಗೆ ಜನ ಖುಷ್

Edited By:

Updated on: Mar 18, 2025 | 9:37 AM

ಕರ್ನಾಟಕದ ಹಲವೆಡೆ ಬೇಸಗೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ. ಇದೀಗ ಮೈಸೂರು ಜಿಲ್ಲೆಯಲ್ಲೂ ಮಳೆಯಾಗಿದೆ. ಸೋಮವಾರ ಸಂಜೆ ಹಾಗೂ ರಾತ್ರಿ ಸುರಿದ ಭರ್ಜರಿ ಮಳೆ ಜನರನ್ನು ಹರ್ಷಚಿತ್ತರನ್ನಾಗಿಸಿದೆ.

ಮೈಸೂರು, ಮಾರ್ಚ್ 18: ಮೈಸೂರು ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಹಾಗೂ ರಾತ್ರಿ ಭರ್ಜರಿ ಮಳೆಯಾಗಿದೆ. ಹುಣಸೂರು, ಕೆಆರ್ ನಗರ, ಹೆಚ್​ಡಿ ಕೋಟೆ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಹುಣಸೂರಿ‌ನಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಿದೆ. ಹುಣಸೂರು ನಗರಸಭೆ ಆವರಣದಲ್ಲಿ ಸುಂಟರಗಾಳಿ ಹಾಗೂ ಮಳೆಯಾಗಿದೆ. ಕೆಆರ್ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಜನರು ಪಾತ್ರೆಗಳು, ಬಕೆಟ್‌ನಲ್ಲಿ ಆಲಿಕಲ್ಲು ಸಂಗ್ರಹಿಸಿದ್ದು ಕಂಡುಬಂತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More