Red Alert in Udupi: ಉಡುಪಿಯಲ್ಲಿ ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ನದಿಗಳು, ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಕೆಲದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಉದ್ಯಾವರದ ಮೂಲಕ ಹರಿಯುವ ಪಾಪನಾಶಿನಿ ನದಿ (Papanasini River) ಮತ್ತು ಹಿರಿಯಡ್ಕದ ಮೂಲಕ ಹರಿಯುವ ಸುವರ್ಣ ನದಿ (Suvarna River) ತುಂಬಿ ಹರಿಯುತ್ತಿವೆ. ಟಿವಿ9 ಕನ್ನಡ ವಾಹಿನಿ ಉಡುಪಿ ವರದಿಗಾರ ಪ್ರಜ್ವಲ್ ಅಮೀನ್ ಜಿಲ್ಲೆಯ ಮಳೆಯಿಂದ ಉಂಟಾಗಿರುವ ಸ್ಥಿತಿಯ ಬಗ್ಗೆ ಪ್ರತ್ಯಕ್ಷ ವಿವರಣೆ ನೀಡಿದ್ದಾರೆ. ಜಿಲ್ಲಾಡಳಿತ ಈಗಾಗಲೇ ರೆಡ್ ಅಲರ್ಟ್ (Red Alert) ಘೋಷಿಸಿದೆ ಮತ್ತು ಶಾಲಾ ಕಾಲೇಜುಗಳನ್ನು ಮುಚ್ಚುವ ಆದೇಶ ಹೊರಡಸಿದೆ. ಕಳೆದೆರಡು ಮೂರು ದಿನಗಳಿಂದ ಜೋರಾಗಿ ಬೀಸುತ್ತಿದ್ದ ಗಾಳಿಯ ಅಬ್ಬರ ಕಡಿಮೆಯಾಗಿದೆಯಾದರೂ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಕೆಲದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಭಾಗದ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

