ಬಿಸಿಲಿನಿಂದ ಕಂಗೆಟ್ಟ ಜನರಿಗೆ ತಂಪೆರೆದ ವರುಣ: ಮಳೆಯಿಂದ ಇಳಕಲ್ ಭಾಗದ ರೈತರಲ್ಲಿ ಸಂತಸ

Updated on: Jun 08, 2023 | 7:42 PM

ಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಇಳಕಲ್ ನಗರದಲ್ಲಿ ಸುಮಾರು ಅರ್ಧ ಗಂಟೆವರೆಗೆ ಮಳೆ ಸುರಿದಿದೆ.

ಬಾಗಲಕೋಟೆ: ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆರಾಯ (Rain)  ತಂಪೆರೆದಿದ್ದಾನೆ. ಜಿಲ್ಲೆಯ ಇಳಕಲ್ ನಗರದಲ್ಲಿ ಸುಮಾರು ಅರ್ಧ ಗಂಟೆವರೆಗೆ ಗಾಳಿ, ಗುಡುಗು ಜೊತೆಗೆ ಭಾರೀ ಮಳೆ ಸುರಿದಿದ್ದು, ಪರಿಣಾಮ ಭೂಮಿ ತಂಪಾಗಿದೆ. ವರುಣನ ಸಿಂಚನ ಇಳಕಲ್ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ. ಬಿಸಿಲಿನಿಂದ ಕಂಗೆಟ್ಟವರಿಗೆ ಮಳೆರಾಯ ಕರುಣೆ ತೋರಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More