ಯಾದಗಿರಿ, (ಮೇ 28): ಯಾದಗಿರಿ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇದರಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆಗೆ ಎಲ್ಲೊಂದರಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದು ಬಿದ್ದಿದ್ದು, ಪರಿಣಾಮ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಾಲ್ವಾಡಗಿ, ಬಲ್ಕಲ್, ಮರಮಕಲ್ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಡಿತವಾಗಿದ್ದರಿಂದ ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಗ್ರಾಮೀಣ ಭಾಗದ ಜನ ಪರದಾಡುತ್ತಿದ್ದಾರೆ. ಮೊಬೈಲ್ ಇಲ್ಲದೇ ಏನು ಇಲ್ಲ ಎಂದು ಕೊನೆಗೆ ಫೋನ್ ಚಾರ್ಜ್ ಮಾಡಿಕೊಳ್ಳಲೆಂದೇ ಗ್ರಾಮದ ಒಂದು ಸ್ಥಳದಲ್ಲೇ ಡಿಸೇಲ್ ಇಂಜೀನ್ ಆನ್ ಮಾಡಿದ್ದು, ಇದರ ಮೂಲಕ ಇದೀಗ ಜನರು ಮೊಬೈಲ್ ಚಾರ್ಜ್ ಹಾಕಿಕೊಳ್ಳಲು ಮುಗಿಬಿದ್ದಿದ್ದಾರೆ. ವಿದ್ಯುತ್ ಪೂರೈಕೆ ಆಗದ್ದಕ್ಕೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಲೇ ಒಂದೆ ಕಡೆ ನೂರಾರು ಮೊಬೈಲ್ ಗಳನ್ನ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:07 pm, Tue, 28 May 24