Monsoon delays: ಮಾನ್ಸೂನ್ ಸೀಸನ್ ಶುರುವಾಗಿ ಎರಡು ವಾರ ಕಳೆಯಿತು, ಮಳೆರಾಯ ಇನ್ನೂ ಅದೃಶ್ಯ, ಯಾದಗಿರಿ ರೈತರು ಕಂಗಾಲು

ಅರುಣ್​ ಕುಮಾರ್​ ಬೆಳ್ಳಿ

Updated on: Jun 19, 2023 | 11:04 AM

ಇನ್ನೊಂದು ವಾರದ ಅವಧಿಯಲ್ಲಿ ಮಳೆಯಾಗದಿದ್ದರೆ ಕ್ಷಾಮದ ಸ್ಥಿತಿ ತಲೆದೋರಲಿದೆ ಎಂದು ರೈತರು ನೋವು ಮತ್ತು ಭಯ ಮಿಶ್ರಿತ ಧ್ವನಿಯಲ್ಲಿ ಹೇಳುತ್ತಾರೆ.

ಯಾದಗಿರಿ: ಮಾನ್ಸೂನ್ ಸೀಸನ್ (Monsoon season) ಶುರುವಾಗಿ ಎರಡು ವಾರ ಕಳೆದರೂ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗದೆ ರೈತಾಪಿ ಜನ ತೀವ್ರ ಕಳವಳಗೊಂಡಿದ್ದಾರೆ. ಉತ್ತರ ಕರ್ನಾಟಕದ ರೈತರಂತೂ ಮಳೆಯಿಲ್ಲದೆ ಕಂಗಾಲಾಗರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಮೂಲಕ ಹರಿದು ಹೋಗುವ ಭೀಮಾ ನದಿ (Bhima River ) ಸಂಪೂರ್ಣವಾಗಿ ಬತ್ತಿಹೋಗಿದ್ದು ರೈತರಿಗೆ ಗಾಯದ ಮೇಲೆ ಬರೆಯಿಟ್ಟಂತಾಗಿದೆ. ಭತ್ತ ಬೆಳೆಯುವ ರೈತರು ಗದ್ದೆಯನ್ನು ಹದಮಾಡಿಕೊಂಡು, ಸಸಿ ನಾಟಲು ಅಣಿಯಾಗಿದ್ದಾರೆ ಅದರೆ ಮಳೆರಾಯನ ಸುಳಿವೇ ಇಲ್ಲ. ಹತ್ತಿ ಮತ್ತು ಹೆಸರು ಬಿತ್ತುವದು ಸಹ ವಿಳಂಬಗೊಂಡಿದೆ. ಇನ್ನೊಂದು ವಾರದ ಅವಧಿಯಲ್ಲಿ ಮಳೆಯಾಗದಿದ್ದರೆ ಕ್ಷಾಮದ (drought) ಸ್ಥಿತಿ ತಲೆದೋರಲಿದೆ ಎಂದು ರೈತರು ನೋವು ಮತ್ತು ಆತಂಕ ತುಂಬಿದ ಧ್ವನಿಯಲ್ಲಿ ಹೇಳುತ್ತಾರೆ. ಟಿವಿ9 ಕನ್ನಡ ವಾಹಿನಿಯ ಯಾದಗಿರಿ ವರದಿಗಾರ ಜಿಲ್ಲೆಯ ವಡಗೇರಾದ ರೈತರೊಂದಿಗೆ ಮಾತಾಡಿರುವ ವಿಡಿಯೋ ಇದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.